Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...