ಸುಮಾರು ಎರಡು ದಶಕಗಳ ಹಿಂದಿನ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಲೆ ಪ್ರಕರಣದ ಇತರ ಆರೋಪಿಗಳಾದ ಕ್ರಿಶನ್ ಲಾಲ್, ಜಸ್ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್ದಿಲ್ ಸಿಂಗ್ಗೂ ಜೀವಾವಧಿ ಶಿಕ್ಷೆ ನೀಡಿದೆ. ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ 31 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಪ್ರಕರಣದ ಆರನೇ ಆರೋಪಿ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ಈ ತಿಂಗಳ ಆರಂಭದಲ್ಲಿ ಹರಿಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಈ ಐವರೂ ತಪ್ಪಿತಸ್ಥರೆಂದು ಘೋಷಿಸಿತ್ತು.
2017 ರಲ್ಲಿ ಇಬ್ಬರು ಅನುಯಾಯಿಗಳ ಅತ್ಯಾಚಾರದ ಆರೋಪ ಹೊತ್ತು ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇತರ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿದ್ದರು.
ಇದನ್ನೂ ಓದಿ: ’ಹಿಂದೂಗಳಿಗೆ ಮಾತ್ರ’: ವಿವಾದ ಸೃಷ್ಟಿಸಿದ ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಜಾಹೀರಾತು
Ranjit Singh murder case | Special CBI court in Panchkula awards life imprisonment to all the accused, including Dera Sacha Sauda's Gurmeet Ram Rahim and four others. A fine of Rs 31 Lakhs levied on Ram Rahim and Rs 50,000 on the remaining accused. pic.twitter.com/WUQMA30sG6
— ANI (@ANI) October 18, 2021
ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅನುಯಾಯಿ ಮತ್ತು ಹರಿಯಾಣದ ಸಿರ್ಸಾದಲ್ಲಿ ಡೇರಾದ ಮ್ಯಾನೇಜರ್ ಆಗಿದ್ದ ರಂಜಿತ್ ಸಿಂಗ್ ಅವರನ್ನು ಜುಲೈ 10, 2002 ರಂದು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.
ಡೇರಾ ಸಚ್ಚಾ ಸೌಧದ ಅನುಯಾಯಿಗಳ ನಡುವೆ ಅನಾಮಧೇಯ ಪ್ರಸಾರ ಮಾಡಿದರೆಂದು ರಂಜಿತ್ ಸಿಂಗ್ ಅವರನ್ನು ಶಂಕಿಸಿ ಕೊಲೆ ಮಾಡಲಾಗಿತ್ತು. ಪತ್ರದಲ್ಲಿ ರಾಮ್ ರಹೀಮ್ ಮಹಿಳಾ ಅನುಯಾಯಿಗಳನ್ನು ಹೇಗೆ ಲೈಂಗಿಕವಾಗಿ ಶೋಷಣೆಗೊಳಪಡಿಸುತ್ತಾರೆ ಎಂಬ ಬಗ್ಗೆ ವಿವರಿಸಲಾಗಿತ್ತು.
2017 ರಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 20 ವರ್ಷಗಳ ಶಿಕ್ಷೆಯ ಹೊರತಾಗಿಯೂ, ರಾಮ್ ರಹೀಮ್ಗೆ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಕೇಸ್ನಲ್ಲಿ ಎರಡು ವರ್ಷಗಳ ಹಿಂದೆ ಮತ್ತೊಂದು ಜೀವಾವಧಿ ಶಿಕ್ಷೆ ನೀಡಲಾಗಿದೆ.
ಇದನ್ನೂ ಓದಿ: ‘ರಾಮಾಯಣ’ ಅಣಕ ಆರೋಪ: ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ


