Homeಅಂತರಾಷ್ಟ್ರೀಯಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಕಳೆದ ವಾರ ದುರ್ಗಾ ಪೂಜೆಯ ಸಂದರ್ಭದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ವಿಧ್ವಂಸಕ ಘಟನೆಗಳ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ ನಡೆಸಿತ್ತು. ಇದರ ಬೆನ್ನಲ್ಲೇ ಹಿಂದೂಗಳಿಗೆ ಸೇರಿದ ಅರವತ್ತಾರು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಜೊತೆಗೆ 29ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬಾಂಗ್ಲಾ ರಾಜಧಾನಿ ಢಾಕಾದಿಂದ ಸುಮಾರು 255 ಕಿಮೀ ದೂರದಲ್ಲಿರುವ ಹಳ್ಳಿಯಲ್ಲಿ ಭಾನುವಾರ ತಡರಾತ್ರಿ ಬೆಂಕಿ ಹಚ್ಚಲಾಗಿದೆ ಎಂದು bdnews24.com ವರದಿ ಮಾಡಿದೆ.

ಉತ್ತರ ಜಿಲ್ಲೆಯ ಪಿರ್ಗಂಜ್ ಉಪಜಿಲಾದ ಮಾಝೀಪಾರ-ಬೊತ್ತಲ ಮತ್ತು ಹತಿಬಂಧ ಗ್ರಾಮದಲ್ಲಿ ಕನಿಷ್ಠ 20 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ದಾಳಿಕೋರರು ಸ್ಥಳೀಯ ಹಿಂದೂ ದೇವಸ್ಥಾನವನ್ನು ಧ್ವಂಸಗೊಳಿಸಿದ್ದಾರೆ.

ಹಳ್ಳಿಯ ಹಿಂದೂ ಯುವಕನೊಬ್ಬ ಫೇಸ್‌ಬುಕ್ ಪೋಸ್ಟ್‌ನಲ್ಲಿ “ಧರ್ಮವನ್ನು ಅವಹೇಳನ ಮಾಡಿದ್ದಾರೆ” ಎಂಬ ವದಂತಿಯಿಂದಾಗಿ ಈ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಕಮರುಝಮಾನ್ (Mohammad Qamruzzaman) ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಆ ಯುವಕನ ಮನೆಯ ಸುತ್ತಲೂ ಪೊಲೀಸರು ಕಾವಲು ಕಾಯುತ್ತಿದ್ದಂತೆಯೇ ದಾಳಿಕೋರರು ಹತ್ತಿರದ ಇತರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿ ಹೇಳಿದೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ದಾಳಿಕೋರರು ಸ್ಥಳದಿಂದ ಹಣ ಮತ್ತು ಜಾನುವಾರುಗಳನ್ನು ಲೂಟಿ ಮಾಡಿದ್ದಾರೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಚಾಂದ್‌ಪುರ್ ಮತ್ತು ನೋಖಾಲಿಯಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಹಿಂದೂ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಆರೋಪಿಸಿದೆ.

ಇತ್ತಿಚೀನ ದಾಳಿಗಳಲ್ಲಿ ಹಿಂದೂ ಸಮುದಾಯದ 559 ಮನೆಗಳು ಬೆಂಕಿಗೆ ಆಹುತಿಯಾಗಿವೆ. ಹಿಂದೂಗಳಿಗೆ ಸೇರಿದ 442 ಅಂಗಡಿ ಮುಂಗಟ್ಟುಗಳು ಲೂಟಿಯಾಗಿ ಧ್ವಂಸವಾಗಿವೆ ಎಂದು ವರದಿ ಹೇಳಿದೆ. ಇದೇ ಅವಧಿಯಲ್ಲಿ ಕನಿಷ್ಠ 1,678  ಹಿಂದೂ ದೇವಾಲಯಗಳು, ವಿಗ್ರಹಗಳು ಮತ್ತು ಪೂಜಾ ಸ್ಥಳಗಳ ಮೇಲೆ ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿವೆ ಎಂದು ಅದು ಹೇಳಿದೆ. ಈ ಘಟನೆಗಳಲ್ಲಿ ಹಿಂದೂ ಸಮುದಾಯದ 11 ನಾಗರಿಕರು ಸಾವನ್ನಪ್ಪಿದ್ದರೆ, 862 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಕಳೆದ ಗುರುವಾರ ದ್ವಾರಕೇಶ್ವರಿ ರಾಷ್ಟ್ರೀಯ ದೇವಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪ್ರಧಾನಿ ಶೇಖ್ ಹಸೀನಾ, “ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರನ್ನು, ದಾಳಿಗೆ ಸಂಬಂಧಿಸಿದ ಘಟನೆಗಳನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ. ಯಾರನ್ನೂ ಬಿಡುವುದಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ಅವರನ್ನು ಹುಡುಕಿ  ಶಿಕ್ಷಿಸಲಾಗುವುದು” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂಗಳಿಗೆ ಇದು ಎಚ್ಚರಿಕೆಯ ಘಂಟೆ. ಇಂದು ಬಂಗ್ಲಾದೇಶದಲ್ಲಿ ಮುಂದೊಂದು ದಿನ ಭಾರತದಲ್ಲಿ ಇದನ್ನು ತಪ್ಪಿಸಬೇಕಾದರೆ ಮೋದಿಜಿಯವರಂತಹ ನಾಯಕತ್ವ ಮುಂದುವರೆಯಲೇಬೇಕು.ಹಿಂದೂಗಳು ಒಗ್ಗಟ್ಟಾಗುವದು ಅವಶ್ಯವಾಗಿದೆ. ಇನ್ನಾದರೂ ಜಾತಿ,ಪಂಗಡ ಬಿಟ್ಟು ದೇಶದ ಭದ್ರತೆ ಹಾಗೂ ಮುಂದಿನ ನಮ್ಮ ಪೀಳಿಗೆಗಳ ಒಳಿತಿಗಾಗಿ ಮೋದಿಜಿಯವರ ಆಡಳಿತವನ್ನು ಮುಂದುವರೆಸಲು ಶ್ರಮಿಸುವ.
    . ಎಚ್ಚರ ಹಿಂದೂಗಳೇ ಎಚ್ಚರ !

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...