Homeಚಳವಳಿಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

ಲಖಿಂಪುರ್‌‌ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲೆ ವಾಹನ ಹತ್ತಿಸಿ ಎಂಟು ಮಂದಿಯ ಸಾವಿಗೆ ಕಾರಣರಾದ ಆರೋಪದಲ್ಲಿ ಒಬ್ಬ ಬಿಜೆಪಿ ಮುಖಂಡ ಸೇರಿದಂತೆ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

ರೈತರ ಮೇಲೆ ಹರಿದ ಕಾರಿನಲ್ಲಿದ್ದವರನ್ನು ಸೋಮವಾರ ಬಂಧಿಸಲಾಗಿದ್ದು, ಈಗಾಗಲೇ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾನನ್ನು ಬಂಧಿಸಲಾಗಿತ್ತು.

“ಆರೋಪಿಗಳಾದ ಸುಮಿತ್‌ ಜೈಸ್ವಾಲ್‌, ಶಿಶುಪಾಲ್‌, ನಂದನ್‌ ಸಿಂಗ್ ಬಿಸ್ಟ್‌, ಸತ್ಯ ಪ್ರಕಾಶ್‌ ತ್ರಿಪಾಠಿ ಎಂಬವರನ್ನು ಲಖಿಂಪುರ್‌ ಖೇರಿ ಪೊಲೀಸರು ಹಾಗೂ ಅಪರಾಧ ಬ್ರಾಂಚ್ಆದ ಸ್ವಾತ್‌‌ ತಂಡದವರು ಬಂಧಿಸಿದ್ದಾರೆ. ಸತ್ಯ ಪ್ರಕಾಶ್ ತ್ರಿಪಾಠಿ ಅವರ ಬಳಿ ಇದ್ದ ಪರವಾನಗಿ ಇದ್ದ ಬಂದೂಕು ಹಾಗೂ ಮೂರು ಬುಲೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

ರೈತರ ಮೇಲೆ ಹರಿದ ಎಸ್‌ಯುವಿಯಲ್ಲಿ ಬಿಜೆಪಿ ಸ್ಥಳೀಯ ಮುಖಂಡ ಸುಮಿತ್‌ ಜೈಸ್ವಾಲ್‌ ಪರಾರಿಯಾಗುತ್ತಿರುವುದನ್ನು ವೈರಲ್‌ ವಿಡಿಯೋದಲ್ಲಿ ಕಾಣಬಹುದು. ಇದಕ್ಕೂ ಮುಂಚೆ, “ರೈತರು ತಮ್ಮ ಮೇಲೆ ಕಲ್ಲುಗಳನ್ನು ತೂರಾಟ ನಡೆಸಿದ್ದರಿಂದ ವಾಹನ ನಿಯಂತ್ರಣ ಕಳೆದುಕೊಂಡಿತು. ಅಪರಿಚಿತ ರೈತರು ನನ್ನ ವಾಹನ ಚಾಲಕ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರು” ಎಂದು ಹೇಳಿ ಅಪರಿಚಿತ ರೈತರ ಮೇಲೆ ಕೊಲೆ ಆಪಾದನೆ ಹೊರಿಸಿ ಜೈಸ್ವಾಲ್‌ ಎಫ್‌ಐಆರ್‌ ದಾಖಲಿಸಿದ್ದರು.

‌ಅಕ್ಟೋಬರ್‌‌ 3ರಂದು ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ನನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಕೋನಿಯ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌ 3ರಂದು ಪ್ರಕರಣ ದಾಖಲಾಗಿತ್ತು. ಈಗ ಬಂಧನವಾಗಿರುವ ಸುಮಿತ್‌ ಜೈಸ್ವಾಲ್‌ ನೀಡಿದ ದೂರಿನ ಅನ್ವಯವೂ ಅದೇ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು.

ಆಶೀಶ್‌ ಮಿಶ್ರಾ ಅವರ ಬೆಂಗಾವಲಿನ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಆದರೆ ಕಾರು ಚಲಿಸುತ್ತಿರಲಿಲ್ಲ ಎಂದ ಜೈಸ್ವಾಲ್‌ ಹೇಳಿಕೊಂಡಿದ್ದರು.

“ನಾವು ಕಾರ್ಯಕ್ರಮದ ಸ್ಥಳದಲ್ಲಿದ್ದೆವು. ಭಯದ ವಾತಾವರಣವಿತ್ತು. ಪ್ರತಿಭಟನಾಕಾರರು ದೊಣ್ಣೆಗಳು ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತರಾಗಿದ್ದರು. ಜೊತೆಗೆ ನಮ್ಮ ಮೇಲೆ ಹಲ್ಲೆ ಮಾಡಿದರು, ನಮ್ಮನ್ನು ನಿಂದಿಸಿದರು. ಜೊತೆಗೆ ಖಾಲಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರು” ಎಂದು ಬಿಜೆಪಿ ಮುಖಂಡ ಜೈಸ್ವಾಲ್‌ ಆರೋಪಿಸಿದ್ದರು.

ಅಜಯ್‌ ಮಿಶ್ರಾ ಬಂಧನಕ್ಕೆ ಆಗ್ರಹ

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ಖಂಡಿಸಿ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ರೈತರು ಸೋಮವಾರ (ಅ.18) ದೇಶಾದ್ಯಂತ ರೈಲ್ ರೋಕೋ ಚಳವಳಿ ನಡೆಸಿದೆ.

ಕಳೆದ ವರ್ಷದಿಂದ ಒಕ್ಕೂಟ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ಸಂಸ್ಥೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಸೋಮವಾರ ಆರು ಗಂಟೆಗಳ ಕಾಲ ದೇಶಾದ್ಯಂತ ‘ರೈಲು ರೋಕೋ’ ಆಂದೋಲನಕ್ಕೆ ಕರೆ ನೀಡಿತ್ತು.

 ಇದನ್ನೂ ಓದಿರಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...