Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...