Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...