Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...