Homeಮುಖಪುಟಮಹಾರಾಷ್ಟ್ರ:ಮಧ್ಯರಾತ್ರಿ 12 ರ ವರೆಗೆ ರೆಸ್ಟೋರೆಂಟ್ಸ್‌‌ ತೆರೆಯಲು ಅನುಮತಿ

ಮಹಾರಾಷ್ಟ್ರ:ಮಧ್ಯರಾತ್ರಿ 12 ರ ವರೆಗೆ ರೆಸ್ಟೋರೆಂಟ್ಸ್‌‌ ತೆರೆಯಲು ಅನುಮತಿ

- Advertisement -
- Advertisement -

ಕೊರೊನಾ ಒಂದನೆ ಮತ್ತು ಎರಡನೇ ಅಲೆಯ ಸಮಯದಲ್ಲಿ ಭಾರಿ ಸಂಕಷ್ಟಕ್ಕೆ ಒಳಗಾಗಿದ್ದ ಮಹಾರಾಷ್ಟ್ರದಲ್ಲಿ ಇದೀಗ ಸೋಂಕು ತಹಬದಿಗೆ ಬಂದಿದೆ. ರಾಜ್ಯವು ತನ್ನ ಕೊರೊನಾ ನಿಯಮಗಳನ್ನು ಹಂತ-ಹಂತವಾಗಿ ಸಡಿಲಿಕೆ ಮಾಡುತ್ತಿದೆ. ರಾಜ್ಯದ ಹೊಸ ನಿಮಯಗಳಂತೆ ಇಂದಿನಿಂದ ರೆಸ್ಟೋರೆಂಟ್‌ಗಳು ಮಧ್ಯರಾತ್ರಿ 12 ರ ವರೆಗೆ ಮತ್ತು ಅಂಗಡಿಗಳನ್ನು ರಾತ್ರಿ 11 ಗಂಟೆಯವರೆಗೆ ತೆರೆದಿಡಲು ಅನುಮತಿ ನೀಡಲಾಗಿದೆ.

ಇದಕ್ಕಿಂತಲೂ ಮುಂಚೆ ಅಂಗಡಿಗಳು ಮತ್ತು ರೆಸ್ಟೋರೆಂಟ್‌‌ಗಳಿಗೆ ರಾತ್ರಿ 10 ರವರೆಗೆ ಮಾತ್ರ ತೆರೆದಿಡಲು ಅನುಮತಿ ನೀಡಲಾಗಿತ್ತು. ಹೊಸ ಸಡಿಲಿಕೆ ಘೋಷಣೆಯಾಗಿದ್ದರೂ, ರೆಸ್ಟೋರೆಂಟ್ ಸಿಬ್ಬಂದಿಗೆ ಸಂಪೂರ್ಣವಾಗಿ ಲಸಿಕೆ ಹಾಕುವುದು ಅತ್ಯಗತ್ಯ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ಹೆಚ್ಚುವರಿ ಕ್ರಮವಾಗಿ, ಅಗತ್ಯವೆನಿಸಿದರೆ ಸಮಯವನ್ನು ಕಡಿತಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹೆಚ್ಚುವರಿ ಸಮಯದ ವಿಸ್ತರಣೆಯನ್ನು ವಿಶೇಷ ಅನುಮತಿಯಿಲ್ಲದೆ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಚೇರಿಯು ಈ ಆದೇಶದ ಪ್ರತಿಯೊಂದಿಗೆ ಸುದ್ದಿಯನ್ನು ಟ್ವೀಟ್ ಮಾಡಿದೆ.

ಸೋಮವಾರವಷ್ಟೇ ವ್ಯವಹಾರದ ಸಮಯವನ್ನು ವಿಸ್ತರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರಂತರವಾಗಿ ಕುಸಿಯುತ್ತಿರುವುದರಿಂದ ಸರ್ಕಾರವು ಮನೋರಂಜನಾ ಉದ್ಯಾನವನಗಳು ಮತ್ತು ಚಿತ್ರಮಂದಿರಗಳನ್ನು ಮತ್ತೆ ತೆರೆಯುವುದಾಗಿ ಘೋಷಿಸಿತ್ತು. ಚಿತ್ರಮಂದಿರಗಳನ್ನು ಅಕ್ಟೋಬರ್ 22 ರಿಂದ ತೆರೆಯಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕಳೆದ ತಿಂಗಳು, ರಾಜ್ಯದ ಅತೀ ದೊಡ್ಡ ಆಚರಣೆಯಾದ ಗಣೇಶ ಹಬ್ಬದ ಸಮಯದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕಟ್ಟುಪಾಡುಗಳನ್ನು ಜಾರಿಗೆ ತಂದಿತ್ತು.

“ಹಬ್ಬಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಯಾರೂ ಬಯಸುವುದಿಲ್ಲ. ಆದರೆ ಜನರ ಜೀವನ ಬಹಳ ಮುಖ್ಯವಾದುದಾಗಿದೆ” ಎಂದು ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಇದುವರೆಗೂ 65.9 ಲಕ್ಷ ಜನರಿಗೆ ಕೊರೊನಾ ಸೋಂಕಿದ್ದು, ಇದುವರೆಗೂ 1.4 ಲಕ್ಷ ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...