Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...