Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...