Homeಅಂತರಾಷ್ಟ್ರೀಯಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್...

ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಕೋಮುವಾದಿ ಶಕ್ತಿಗಳನ್ನು ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿರುತ್ತೇವೆ ಎಂದು ದೇಶದ ಆಡಳಿತರೂಢ ಪಕ್ಷ ಹೇಳಿದೆ

- Advertisement -
- Advertisement -

ಕೋಮು ಹಿಂಸೆಯನ್ನು ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ತನ್ನ ಗೃಹ ಸಚಿವರಿಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಮಂಗಳವಾರ ಸೂಚನೆ ನೀಡಿದ್ದಾರೆ. ಅವರು ದೇಶದ ಜನತೆಯೊಂದಿಗೆ ಸತ್ಯವನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಏನನ್ನೂ ನಂಬಬೇಡಿ ಎಂದು ವಿನಂತಿಸಿದ್ದಾರೆ.

ದುರ್ಗಾ ಪೂಜೆ ಆಚರಣೆಯ ಸಮಯ ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿ ಕಳೆದ ಬುಧವಾರದಿಂದ ಕೋಮುಗಲಭೆ ಭುಗಿಲೆದ್ದಿತ್ತು. ಇದರ ನಂತರ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ತೀವ್ರಗೊಂಡಿವೆ.

ಭಾನುವಾರ ತಡರಾತ್ರಿ, ಗುಂಪೊಂದು 66 ಮನೆಗಳಿಗೆ ಹಾನಿ ಮಾಡಿದ್ದು, ಕನಿಷ್ಠ 20 ಹಿಂದೂ ಧರ್ಮಿಯರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ಮಂಗಳವಾರ ನಡೆದ ವಾರದ ಕ್ಯಾಬಿನೆಟ್ ಸಭೆಯಲ್ಲಿ, ಕೋಮು ಹಿಂಸೆಯನ್ನು ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರಧಾನ ಮಂತ್ರಿ ಹಸೀನಾ ಗೃಹ ಸಚಿವ ಅಸಾದುಝಮಾನ್ ಖಾನ್‌ಗೆ ಸೂಚಿಸಿದ್ದಾರೆ ಎಂದು ಕ್ಯಾಬಿನೆಟ್ ಕಾರ್ಯದರ್ಶಿ ಖಂಡ್ಕರ್ ಅನ್ವರುಲ್ ಇಸ್ಲಾಂ ಅವರು ಹೇಳಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತನ್ನ ಅಧಿಕೃತ ನಿವಾಸದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ಸೇರಿದ ಪ್ರಧಾನ ಮಂತ್ರಿ ಹಸೀನಾ, ದೇಶದ ಜನತೆ ಸತ್ಯವನ್ನು ಪರಿಶೀಲಿಸದೆ ಸಾಮಾಜಿಕ ಮಾಧ್ಯಮದಲ್ಲಿ ಏನನ್ನೂ ನಂಬಬೇಡಿ ಎಂದು ಮನವಿ ಮಾಡಿದರು.

ಜಾಗರೂಕರಾಗಿರಿ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ ಎಂದು ಅನ್ವರುಲ್ ಇಸ್ಲಾಂ ಹೇಳಿದ್ದಾರೆ.

ದೇಶದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ದಾಳಿಯಲ್ಲಿ ಆರು ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ಹಸೀನಾ ಘೋಷಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್! 

ಈ ಮಧ್ಯೆ, ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ‘ಸಾಮರಸ್ಯ ರ್‍ಯಾಲಿ’ಗಳನ್ನು ನಡೆಸುತ್ತಿದ್ದು, ಕೋಮುಗಲಭೆಗಳ ವಿರುದ್ಧ ಮಂಗಳವಾರ ದೇಶದಾದ್ಯಂತ ಶಾಂತಿ ಮೆರವಣಿಗೆಗಳನ್ನು ನಡೆಸುತ್ತಿದೆ.

“ಹಿಂದೂ ಸಹೋದರ ಸಹೋದರಿಯರೇ, ಭಯಪಡಬೇಡಿ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್ ನಿಮ್ಮೊಂದಿಗಿದ್ದಾರೆ. ಶೇಖ್ ಹಸೀನಾ ಸರ್ಕಾರವು ಅಲ್ಪಸಂಖ್ಯಾತ ಸ್ನೇಹಿ ಸರ್ಕಾರವಾಗಿದೆ” ಎಂದು ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್‌‌ ಅವರು ಪಕ್ಷದ ಕೇಂದ್ರ ಕಚೇರಿಯ ಮುಂದೆ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಕೋಮುವಾದಿ ಶಕ್ತಿಗಳ ವಿರುದ್ಧ ಪ್ರತಿರೋಧವನ್ನು ಒಡ್ಡುವಂತೆ ಅವರು ತಮ್ಮ ಪಕ್ಷದ ಸದಸ್ಯರನ್ನು ಕೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಕೋಮುವಾದಿ ಶಕ್ತಿಗಳನ್ನು ಹೆಡೆಮುರಿ ಕಟ್ಟುವವರೆಗೂ ಆಡಳಿತ ಪಕ್ಷವು ಬೀದಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈ ಕೋಮುವಾದಿಗಳಿಗೆ ಸರಿಯಾದ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಒಬೈದುಲ್ ಖಾದರ್‌‌ ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...