Homeಮುಖಪುಟಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್...

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್ ಬಾಬಾ

- Advertisement -
- Advertisement -

ನಾವು ಈ ವರ್ಷದ ಜುಲೈ ತಿಂಗಳಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿ ಇತರ ಬಿಜೆಪಿ ಮುಖಂಡರನ್ನು ರಹಸ್ಯವಾಗಿ ಭೇಟಿಯಾಗಿದ್ದು ನಿಜ. ಸಿಂಘು ಗಡಿಯಲ್ಲಿನಲ್ಲಿ ಧರಣಿ ನಿಲ್ಲಿಸಲು 10 ಲಕ್ಷ ರೂ ಮತ್ತು ಕುದುರೆಗಳ ಆಮಿಷವೊಡ್ಡಿದ್ದರು ಎಂದು ನಿಹಾಂಗ್ ಬಾಬಾ ಅಮನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಅಕ್ಟೋಬರ್ 15 ರಂದು ಸಿಂಘು ಗಡಿಯಲ್ಲಿ ನಿಹಾಂಗ್‌ಗಳಿಂದ ದಲಿತ ಲಖ್ಬೀರ್ ಸಿಂಗ್‌ ಬರ್ಬರ ಕೊಲೆಯಾದ ನಂತರ ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಅದಕ್ಕೆ ಇಂಬು ಕೊಡುವಂತೆ ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಹೇಳಿಕೆ ನೀಡಿದ್ದಾರೆ.

“ನಾವು ನಾಲ್ಕು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟಿದ್ದೆವು. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, 2015ರ ಧರ್ಮಗ್ರಂಥ ಅಪವಿತ್ರಗೊಳಿಸಿರುವ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಬೇಕು ಮತ್ತು ನಿಹಾಂಗ್‌ಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಬೇಡಿಯಾಗಿತ್ತು. ಇವುಗಳನ್ನು ಈಡೇರಿಸಿದರೆ ನಾವು ಧರಣಿಯನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳಿ ಹಣದ ಆಮಿಷವನ್ನು ತಿರಸ್ಕರಿಸಿದ್ದೇವು. ಈ ಕುರಿತು ನಾವು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೂ ಕೂಡ ಪತ್ರ ಬರೆದಿದ್ದೇವೆ” ಎಂದು ಅಮನ್ ಸಿಂಗ್ ಹೇಳಿದ್ದಾರೆ.

ಅವರು ನಿಮ್ಮ ರೈತರ ಜೊತೆ ಸಹ ಮಾತನಾಡಿದ್ದಾರ? ಎಂಬ ಪ್ರಶ್ನೆಗೆ ಅವರು, “ಸಚಿವರು ರೈತರ ಜೊತೆ ಮಾತನಾಡುವ ಅಗತ್ಯವಿರಲಿಲ್ಲ. ಏಕೆಂದರೆ ಅವರನ್ನು ಭೇಟಿಯಾಗಲು ನಾನೊಬ್ಬನೇ ಹೋಗಿರಲಿಲ್ಲ, ನನ್ನೊಡೆನ 10 ಜನ ರೈತರಿದ್ದರು” ಎಂದು ಉತ್ತರಿಸಿದ್ದಾರೆ.

ಲಖ್ಬೀರ್ ಸಿಂಗ್ ಕೊಲೆ ಪ್ರಕರಣದಲ್ಲಿ ಇದುವರೆಗೂ 4 ಜನ ನಿಹಾಂಗ್‌ಗಳ ಬಂಧನವಾಗಿದೆ. ಲಖ್ಬೀರ್ ಸಿಂಗ್ ಪ್ರತಿಭಟನಾ ಸ್ಥಳಕ್ಕೆ ಬಂದುದ್ದೇಕೆ, ಅವರನ್ನು ಕರೆ ತಂದವರು ಯಾರು? ಆತ ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ್ದಕ್ಕೆ ಸಾಕ್ಷಿ ಏನು? ಆತನನ್ನು ಪೊಲೀಸರಿಗೆ ಏಕೆ ಒಪ್ಪಿಸಲಿಲ್ಲ ಎಂಬ ಪ್ರಶ್ನೆಗಳಿಗೆ ನಿಹಾಂಗ್‌ಗಳು ಇನ್ನು ಉತ್ತರಿಸಿಲ್ಲ. ಈ ಸಂದರ್ಭದಲ್ಲಿ ಬಾಬಾ ಅಮನ್ ಸಿಂಗ್ ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಂದುವರೆದು ಮಾತನಾಡಿರುವ ಅಮನ್ ಸಿಂಗ್, “ಇದೇ ಅಕ್ಟೋಬರ್ 27 ರಂದು ನವದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದೇವೆ. ಆ ನಂತರ ನಾವು ಧರಣಿ ಮುಂದುವರೆಸಬೇಕೆ ಅಥವಾ ಅಂತ್ಯಗೊಳಿಸಬೇಕು ಎಂದು ನಿರ್ಧರಿಸುತ್ತೇವೆ. ಸಂಗತ್ ಹೊರಡಿ ಎಂದರೆ ನಾವು ಹೊರಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ನಮ್ಮ ಧರ್ಮಕ್ಕಾಗಿ ಹೋರಾಡುವುದು ಮೊದಲ ಆಯ್ಕೆ, ಎರಡನೇಯದು ರೈತರ ವಿಚಾರ ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಅಂದಿನ ರಹಸ್ಯ ಸಭೆ ನಡೆದಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿಯ ಜೊತೆಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಸಹ ಸಭೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ನಿಹಾಂಗ್ ಗುಂಪು ಮತ್ತು ಬಿಜೆಪಿ ನಾಯಕರ ನಡುವಿನ ಈ ರಹಸ್ಯ ಭೇಟಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...