Homeಮುಖಪುಟಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್...

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್ ಬಾಬಾ

- Advertisement -
- Advertisement -

ನಾವು ಈ ವರ್ಷದ ಜುಲೈ ತಿಂಗಳಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿ ಇತರ ಬಿಜೆಪಿ ಮುಖಂಡರನ್ನು ರಹಸ್ಯವಾಗಿ ಭೇಟಿಯಾಗಿದ್ದು ನಿಜ. ಸಿಂಘು ಗಡಿಯಲ್ಲಿನಲ್ಲಿ ಧರಣಿ ನಿಲ್ಲಿಸಲು 10 ಲಕ್ಷ ರೂ ಮತ್ತು ಕುದುರೆಗಳ ಆಮಿಷವೊಡ್ಡಿದ್ದರು ಎಂದು ನಿಹಾಂಗ್ ಬಾಬಾ ಅಮನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಅಕ್ಟೋಬರ್ 15 ರಂದು ಸಿಂಘು ಗಡಿಯಲ್ಲಿ ನಿಹಾಂಗ್‌ಗಳಿಂದ ದಲಿತ ಲಖ್ಬೀರ್ ಸಿಂಗ್‌ ಬರ್ಬರ ಕೊಲೆಯಾದ ನಂತರ ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಅದಕ್ಕೆ ಇಂಬು ಕೊಡುವಂತೆ ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಹೇಳಿಕೆ ನೀಡಿದ್ದಾರೆ.

“ನಾವು ನಾಲ್ಕು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟಿದ್ದೆವು. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, 2015ರ ಧರ್ಮಗ್ರಂಥ ಅಪವಿತ್ರಗೊಳಿಸಿರುವ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಬೇಕು ಮತ್ತು ನಿಹಾಂಗ್‌ಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಬೇಡಿಯಾಗಿತ್ತು. ಇವುಗಳನ್ನು ಈಡೇರಿಸಿದರೆ ನಾವು ಧರಣಿಯನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳಿ ಹಣದ ಆಮಿಷವನ್ನು ತಿರಸ್ಕರಿಸಿದ್ದೇವು. ಈ ಕುರಿತು ನಾವು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೂ ಕೂಡ ಪತ್ರ ಬರೆದಿದ್ದೇವೆ” ಎಂದು ಅಮನ್ ಸಿಂಗ್ ಹೇಳಿದ್ದಾರೆ.

ಅವರು ನಿಮ್ಮ ರೈತರ ಜೊತೆ ಸಹ ಮಾತನಾಡಿದ್ದಾರ? ಎಂಬ ಪ್ರಶ್ನೆಗೆ ಅವರು, “ಸಚಿವರು ರೈತರ ಜೊತೆ ಮಾತನಾಡುವ ಅಗತ್ಯವಿರಲಿಲ್ಲ. ಏಕೆಂದರೆ ಅವರನ್ನು ಭೇಟಿಯಾಗಲು ನಾನೊಬ್ಬನೇ ಹೋಗಿರಲಿಲ್ಲ, ನನ್ನೊಡೆನ 10 ಜನ ರೈತರಿದ್ದರು” ಎಂದು ಉತ್ತರಿಸಿದ್ದಾರೆ.

ಲಖ್ಬೀರ್ ಸಿಂಗ್ ಕೊಲೆ ಪ್ರಕರಣದಲ್ಲಿ ಇದುವರೆಗೂ 4 ಜನ ನಿಹಾಂಗ್‌ಗಳ ಬಂಧನವಾಗಿದೆ. ಲಖ್ಬೀರ್ ಸಿಂಗ್ ಪ್ರತಿಭಟನಾ ಸ್ಥಳಕ್ಕೆ ಬಂದುದ್ದೇಕೆ, ಅವರನ್ನು ಕರೆ ತಂದವರು ಯಾರು? ಆತ ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ್ದಕ್ಕೆ ಸಾಕ್ಷಿ ಏನು? ಆತನನ್ನು ಪೊಲೀಸರಿಗೆ ಏಕೆ ಒಪ್ಪಿಸಲಿಲ್ಲ ಎಂಬ ಪ್ರಶ್ನೆಗಳಿಗೆ ನಿಹಾಂಗ್‌ಗಳು ಇನ್ನು ಉತ್ತರಿಸಿಲ್ಲ. ಈ ಸಂದರ್ಭದಲ್ಲಿ ಬಾಬಾ ಅಮನ್ ಸಿಂಗ್ ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಂದುವರೆದು ಮಾತನಾಡಿರುವ ಅಮನ್ ಸಿಂಗ್, “ಇದೇ ಅಕ್ಟೋಬರ್ 27 ರಂದು ನವದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದೇವೆ. ಆ ನಂತರ ನಾವು ಧರಣಿ ಮುಂದುವರೆಸಬೇಕೆ ಅಥವಾ ಅಂತ್ಯಗೊಳಿಸಬೇಕು ಎಂದು ನಿರ್ಧರಿಸುತ್ತೇವೆ. ಸಂಗತ್ ಹೊರಡಿ ಎಂದರೆ ನಾವು ಹೊರಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ನಮ್ಮ ಧರ್ಮಕ್ಕಾಗಿ ಹೋರಾಡುವುದು ಮೊದಲ ಆಯ್ಕೆ, ಎರಡನೇಯದು ರೈತರ ವಿಚಾರ ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಅಂದಿನ ರಹಸ್ಯ ಸಭೆ ನಡೆದಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿಯ ಜೊತೆಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಸಹ ಸಭೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ನಿಹಾಂಗ್ ಗುಂಪು ಮತ್ತು ಬಿಜೆಪಿ ನಾಯಕರ ನಡುವಿನ ಈ ರಹಸ್ಯ ಭೇಟಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...