Homeಕರ್ನಾಟಕನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ನಿಜವಾದ ಡ್ರಗ್ ಡೀಲರ್, ಡ್ರಗ್ ಪೆಡ್ಲರ್‌‌ ಎಂದರೆ ಮೋದಿ, ಅಮಿತ್ ಶಾ: ರಕ್ಷಾ ರಾಮಯ್ಯ

ಸುಮಾರು 20,000 ಕೋಟಿ ರೂ. ಮೌಲ್ಯದ ಹೆರಾಯಿನ್‌‌ ಗುಜರಾತ್‌‌ನ ಅದಾನಿ ಬಂದರಿನಲ್ಲಿ ಪತ್ತೆಯಾಗಿದ್ದನ್ನು ಉಲ್ಲೇಖಿಸಿ ನಳೀನ್‌ ಕುಮಾರ್‌ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಡ್ರಗ್, ಪ್ರಡ್ಲರ್ ಎಂದು ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿರುವ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, “ನಿಜವಾದ ಡ್ರಗ್ ಡೀಲರ್, ಡ್ರಗ್ ಪ್ಲಡ್ಲರ್ ಎಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಮೇಲೆ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್‌‌ನ ಅದಾನಿ ಮಾಲೀಕತ್ವದ ಬಂದರಿನಲ್ಲಿ ಮೂರು ಸಾವಿರ ಕೆ.ಜಿ. ಹೆರಾಯಿನ್ ಪತ್ತೆಯಾಗಿದ್ದು, ಈ ಬಗ್ಗೆ ಯಾವುದಾದರೂ ತನಿಖೆ ನಡೆಯುತ್ತಿದೆಯೇ? ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಗುಜರಾತ್ ಅತಿ ಹೆಚ್ಚು ಮಂದಿ ಡ್ರಗ್ ಪ್ಲಡ್ಲರ್‌ಗಳ ತಾಣವಾಗಿದೆ. ಇವರನ್ನು ದೊಡ್ಡ ದೊಡ್ಡ ರಾಜಕಾರಣಿಗಳು ಪೋಷಿಸುತ್ತಿದ್ದಾರೆ. ತಮ್ಮ ರಾಜ್ಯದ ಈ ಅಕ್ರಮ ವ್ಯವಹಾರದ ಬಗ್ಗೆ ಪ್ರಧಾನಿ, ಕೇಂದ್ರ ಗೃಹ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಮಾಲಿಕತ್ವದ ಬಂದರಿನಲ್ಲಿ 20 ಸಾವಿರ ಕೋಟಿ ರೂ.ಗಳ ಹೆರಾಯಿನ್ ವಶ

ಅದಾನಿ ಪೋರ್ಟ್‌ನಲ್ಲಿ ದೊರೆತ ಮಾದಕ ದ್ರವ್ಯದ ಬಗ್ಗೆ ಬಿಜೆಪಿ ಮಟ್ಟದಲ್ಲಿ ಏನಾದರೂ ಚರ್ಚೆಯಾಗಿದೆಯೇ? ಯಾವುದಾದರೂ ಮಾಹಿತಿ ಬಿಡುಗಡೆ ಮಾಡಲಾಗಿದೆಯೇ? ಗುಜರಾತ್‌ನಲ್ಲಿ ಅತಿ ಹೆಚ್ಚು ಮಾದಕ ದ್ರವ್ಯ ದೊರೆಯುತ್ತಿದೆ. ನಿಷೇಧಿತ ಕ್ಯಾಟಮೈನ್ ಮಾದಕ ವಸ್ತು ವಿಶ್ವದಲ್ಲಿಯೇ ಅತಿ ಹೆಚ್ಚು ದೊರೆಯುವ ತಾಣ ಎಂದರೆ ಅದು ಗುಜರಾತ್, ಹೀಗಿರುವಾಗ ರಾಹುಲ್ ಗಾಂಧಿ ಅವರ ಮೇಲೆ ಯಾವ ಉದ್ದೇಶದಿಂದ ಟೀಕೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದರೂ, ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಸಿಗುತ್ತಿದೆ. ಮದ್ಯ ಮಾರಾಟ ತಡೆಗೆ ಯಾವುದಾದರೂ ಕ್ರಮ ಕೈಗೊಳ್ಳಲಾಗಿದೆಯೇ? ಇದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಅರ್ಥಮಾಡಿಕೊಂಡು ಇನ್ನೊಬ್ಬರ ಬಗ್ಗೆ ಸದಾಶಯದಿಂದ ಮಾತನಾಡಬೇಕು. ಕಟೀಲ್ ಅವರದ್ದು ಅತ್ಯಂತ ಕೀಳು ಅಭಿರುಚಿಯ ಮತ್ತು ಹತಾಶೆಯ ಹೇಳಿಕೆಯಾಗಿದೆ ಎಂದು ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಅದಾನಿ ಬಂದರಿನಲ್ಲಿ ಮೂರು ಸಾವಿರ ಕೆ.ಜಿ.ಗೂ ಹೆಚ್ಚು ಮಾದಕ ದ್ರವ್ಯ ಪತ್ತೆಯಾಗಿತ್ತು. ಈ ಬಗ್ಗೆ ಯಾವ ತನಿಖೆ ನಡೆಯುತ್ತಿದೆ. ಗುಜರಾತ್ ಮಾದಕ ದ್ರವ್ಯದ ತಾಣವಾಗಿದ್ದು, ಇದು ಗುಜರಾತ್ ಮಾದರಿಯ ಆಡಳಿತವೇ? ಗಾಂಧಿ ನಾಡು ಗುಜರಾತ್‌ನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ಕಾಳಸಂತೆಯಲ್ಲಿ ಅತಿ ಹೆಚ್ಚು ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದೆ. ಇದನ್ನು ಮೊದಲು ನಿಯಂತ್ರಿಸಲು ಬಿಜೆಪಿ ನಾಯಕರು ಮುಂದಾಗಲಿ. ನಂತರ ಇನ್ನೊಬ್ಬರ ಬಗ್ಗೆ ಟೀಕಿಸಲಿ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ನಮ್ಮ ಪಕ್ಷದಿಂದ ಈಗಾಗಲೇ ಆಂಬುಲೆನ್ಸ್ ಅನ್ನು ಬಿಜೆಪಿ ಕಚೇರಿಗೆ ಕಳುಹಿಸಲಾಗಿದೆ. ಇದೇ ರೀತಿ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಮತ್ತೊರ್ವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯತ್ನಾಳ್ ಅವರಿಗೂ ಮಾನಸಿಕ ಚಿಕಿತ್ಸೆ ಕೊಡಿಸುತ್ತೇವೆ. ನಳೀನ್ ಕುಮಾರ್ ಕಟೀಲ್ ಹಾಗೂ ಬಸನಗೌಡ ಪಾಟೀಲ್ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಬಿಜೆಪಿ ನಾಯಕರ ಇಂತಹ ಧೋರಣೆಯನ್ನು ಯುವ ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿರಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...