Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...