Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...