Homeಮುಖಪುಟಯುಪಿ: ಪೊಲೀಸ್‌ ಠಾಣೆಯಿಂದಲೇ 25 ಲಕ್ಷ ರೂ. ನಗದು ಮತ್ತು 2 ಪಿಸ್ತೂಲ್ ಕಳವು!

ಯುಪಿ: ಪೊಲೀಸ್‌ ಠಾಣೆಯಿಂದಲೇ 25 ಲಕ್ಷ ರೂ. ನಗದು ಮತ್ತು 2 ಪಿಸ್ತೂಲ್ ಕಳವು!

- Advertisement -
- Advertisement -

ಪೊಲೀಸ್‌‌ ಠಾಣೆಯಿಂದಲೇ 2 ಪಿಸ್ತೂಲ್‌ ಮತ್ತು 25 ಲಕ್ಷ ರೂ. ನಗದು ಕಳವು ಆಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ.

ವರದಿಗಳ ಪ್ರಕಾರ, ಶನಿವಾರ ರಾತ್ರಿ ‘ಮಾಲ್ಖಾನ'(ಜಪ್ತಿ ಮಾಡಿದ ವಸ್ತುಗಳನ್ನು ಪೊಲೀಸರು ಸಂಗ್ರಹಿಸಿರುವ ಸ್ಥಳ) ದಿಂದ ಎರಡು ಪಿಸ್ತೂಲ್ ಮತ್ತು 25 ಲಕ್ಷ ರೂಪಾಯಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಕ್ರಿಮಿನಲ್‌‌ ಪ್ರಕರಣವೊಂದರಲ್ಲಿ ವಶಕ್ಕೆ ಪಡೆದಿದ್ದ 24 ಲಕ್ಷ ರೂಪಾಯಿ ಮತ್ತು ನಾಲ್ಕು ಕಿಲೋಗ್ರಾಂಗಳಷ್ಟು ಚಿನ್ನವನ್ನು ನಾಲ್ಕು ದಿನಗಳ ಹಿಂದೆ ಪೊಲೀಸರು ಮಾಲ್ಖಾನದಲ್ಲಿ ಇಟ್ಟಿದ್ದರು. ಜೊತೆಗೆ ಅದರಲ್ಲಿ ಹಿಂದಿನ ಕ್ರಿಮಿನಲ್ ಪ್ರಕರಣಗಳಿಂದ ವಶಕ್ಕೆ ಪಡೆದಿದ್ದ ನಗದು ಕೂಡಾ ಇತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ತನಿಖೆಯ ಸಮಯದಲ್ಲಿ ಪಿಸ್ತೂಲುಗಳು ಪತ್ತೆಯಾಗಿದ್ದರೂ, 25 ಲಕ್ಷ ರೂ.ಗಳು ಇನ್ನೂ ಪತ್ತೆಯಾಗಿಲ್ಲ. ಇದೀಗ ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಮಾಲ್ಖಾನದಲ್ಲಿ ಇರಿಸಲಾಗಿದ್ದ ಆಭರಣಗಳು ಸೇರಿದಂತೆ ಇತರ ವಸ್ತುಗಳ ದಾಖಲೆಗಳನ್ನು ಕೂಡಾ ತನಿಖೆ ಮಾಡಲಾಗುತ್ತಿದೆ.

ಈ ಮಧ್ಯೆ, ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ), ಸಬ್ ಇನ್ಸ್‌ಪೆಕ್ಟರ್ (ಎಸ್‌ಐ), ಹೆಡ್ ಮುಹರ್ರಿರ್ (ಕ್ಲರ್ಕ್) ಮತ್ತು ಮೂವರು ಕಾನ್‌ಸ್ಟೇಬಲ್‌ಗಳನ್ನು ಸೇವೆಯಲ್ಲಿ ತೋರಿದ ನಿರ್ಲಕ್ಷ್ಯದ ಕಾರಣಕ್ಕೆ ಅಮಾನತುಗೊಳಿಸಲಾಗಿದೆ.

“ಪ್ರಕರಣದ ತನಿಖೆಗಾಗಿ ಆಗ್ರಾ ಎಸ್‌ಎಸ್‌ಪಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಆದ್ಯತೆಯ ಮೇರೆಗೆ ಇದರ ತನಿಖೆ ನಡೆಸಲಾಗುವುದು” ಎಂದು ಆಗ್ರಾ ವಲಯದ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ರಾಜೀವ್ ಕೃಷ್ಣ ಹೇಳಿದ್ದರೆ.

“ನಿರ್ಲಕ್ಷ್ಯದಿಂದ ಇದ್ದ ಮೂವರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ನಂತರ, ಆರೋಪಪಟ್ಟಿಗಳನ್ನು ಸಲ್ಲಿಸಲಾಗುವುದು. ಅಪರಾಧಿಗಳು ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...