Homeಮುಖಪುಟಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ಬಗ್ಗೆ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶದ ಬಗ್ಗೆ ಭಯವೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದು ಆಯಿತು, ಮುಂದಕ್ಕೆ ಮಾಲ್ಡೀವ್‌ಗೆ ನಾವು ಹೆದರಲಿದ್ದೇವೆಯೆ? ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಒಕ್ಕೂಟ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಯಾಕೆ ಪ್ರತಿಭಟಿಸುತ್ತಿಲ್ಲ? ಬಾಂಗ್ಲಾದೇಶಕ್ಕೆ ನಾವು ಹೆದರುತ್ತಿದ್ದೇವೆಯೆ? ಎಂದು ಅವರು ಕೇಳಿದ್ದಾರೆ.

ದುರ್ಗಾ ಪೂಜೆ ಆಚರಣೆಯ ಸಮಯ ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಅಲ್ಲಿ ಕಳೆದ ಬುಧವಾರದಿಂದ ಕೋಮುಗಲಭೆ ಭುಗಿಲೆದ್ದಿತ್ತು. ಇದರ ನಂತರ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ತೀವ್ರಗೊಂಡಿತ್ತು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಈ ಬಗ್ಗೆ ಸೋಮವಾರ ಟ್ವಿಟರ್‌ನಲ್ಲಿ ಪ್ರಶ್ನಿಸಿದ ಸುಬ್ರಮಣಿಯನ್ ಸ್ವಾಮಿ, “ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನರಮೇಧದ ವಿಚಾರದಲ್ಲಿ ಬಿಜೆಪಿ ಸರ್ಕಾರ ಏಕೆ ಪ್ರತಿಭಟಿಸುತ್ತಿಲ್ಲ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತಿದ್ದೇವೆಯೇ?” ಎಂದು ಅವರು ಕೇಳಿದ್ದಾರೆ.

“ಲಡಾಖ್‌ನಲ್ಲಿ ಚೀನಾದ ಆಕ್ರಮಣದ ಬಗ್ಗೆ ಭಯಪಟ್ಟ ನಂತರ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿರುವುದರ ಬಗ್ಗೆ ನಾವು ಹೆದರಿದೆವು. ಈಗ ಅವರೊಂದಿಗೆ ಮಾತನಾಡಲು ಬಯಸುತ್ತಿದ್ದೇವೆ. ಮುಂದಕ್ಕೆ ನಾವು ಮಾಲ್ಡೀವ್ಸ್‌ಗೆ ಹೆದರಲಿದ್ದೇವೆಯೆ?” ಎಂದು ಅವರು ಕೇಳಿದ್ದಾರೆ.

ಭಾನುವಾರ ತಡರಾತ್ರಿ, ಗುಂಪೊಂದು 66 ಮನೆಗಳಿಗೆ ಹಾನಿ ಮಾಡಿದ್ದು, ಕನಿಷ್ಠ 20 ಹಿಂದೂ ಧರ್ಮಿಯರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ದೇಶದ ಬೇರೆ ಬೇರೆ ಕಡೆ ನಡೆದ ಪ್ರತ್ಯೇಕ ದಾಳಿಯಲ್ಲಿ ಆರು ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಕೋಮು ಹಿಂಸೆಯನ್ನು ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ತನ್ನ ಗೃಹ ಸಚಿವರಿಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಮಂಗಳವಾರ ಸೂಚನೆ ನೀಡಿದ್ದಾರೆ. ಅವರು ದೇಶದ ಜನತೆಯೊಂದಿಗೆ ಸತ್ಯವನ್ನು ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಏನನ್ನೂ ನಂಬಬೇಡಿ ಎಂದು ವಿನಂತಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಈ ಮಧ್ಯೆ, ಆಡಳಿತಾರೂಢ ಅವಾಮಿ ಲೀಗ್ ಪಕ್ಷವು ‘ಸಾಮರಸ್ಯ ರ್‍ಯಾಲಿ’ಗಳನ್ನು ನಡೆಸುತ್ತಿದ್ದು, ಕೋಮುಗಲಭೆಗಳ ವಿರುದ್ಧ ಮಂಗಳವಾರ ದೇಶದಾದ್ಯಂತ ಶಾಂತಿ ಮೆರವಣಿಗೆಗಳನ್ನು ನಡೆಸುತ್ತಿದೆ.

“ಹಿಂದೂ ಸಹೋದರ ಸಹೋದರಿಯರೇ, ಭಯಪಡಬೇಡಿ. ಶೇಖ್ ಹಸೀನಾ ಮತ್ತು ಅವಾಮಿ ಲೀಗ್ ನಿಮ್ಮೊಂದಿಗಿದ್ದಾರೆ. ಶೇಖ್ ಹಸೀನಾ ಸರ್ಕಾರವು ಅಲ್ಪಸಂಖ್ಯಾತ ಸ್ನೇಹಿ ಸರ್ಕಾರವಾಗಿದೆ” ಎಂದು ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್‌‌ ಅವರು ಪಕ್ಷದ ಕೇಂದ್ರ ಕಚೇರಿಯ ಮುಂದೆ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಕೋಮುವಾದಿ ಶಕ್ತಿಗಳ ವಿರುದ್ಧ ಪ್ರತಿರೋಧವನ್ನು ಒಡ್ಡುವಂತೆ ಅವರು ತಮ್ಮ ಪಕ್ಷದ ಸದಸ್ಯರನ್ನು ಕೇಳಿದ್ದಾರೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ. ಕೋಮುವಾದಿ ಶಕ್ತಿಗಳನ್ನು ಹೆಡೆಮುರಿ ಕಟ್ಟುವವರೆಗೂ ಆಡಳಿತ ಪಕ್ಷವು ಬೀದಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಈ ಕೋಮುವಾದಿಗಳಿಗೆ ಸರಿಯಾದ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಒಬೈದುಲ್ ಖಾದರ್‌‌ ಹೇಳಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....