Homeಕರ್ನಾಟಕ‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು `ಕನ್ನಡಕ್ಕಾಗಿ ನಾವು’ ಅಭಿಯಾನ ಆರಂಭಿಸಿದ್ದು, ಈ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿರುವ ‘ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ’ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್‌.ರಂಗಪ್ಪ ಮಾತನಾಡಿದ್ದರೆ.

“ಶುದ್ಧ, ಅಶುದ್ಧ ಎಂದು ಹೇಳಿಲ್ಲ. ಕನ್ನಡ ಭಾಷೆಯ ಕುರಿತು ನವೆಂಬರ್‌ ತಿಂಗಳು ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡ ಪದಗಳನ್ನೇ ಬಳಸಿ ಸ್ಪರ್ಧೆ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ಅದು ಆಯ್ಕೆ ಮಾಡುತ್ತದೆ. ಇಂಗ್ಲಿಷ್‌, ಹಿಂದಿ, ಉರ್ದು, ಮರಾಠಿ ಇದ್ಯಾವುದನ್ನೂ ಬಳಸದೆ ಮಾತನಾಡುವ ಸ್ಪರ್ಧೆ ಅದು” ಎದು ತಿಳಿಸಿದ್ದಾರೆ.

ಸಂಸ್ಕೃತ ಭಾಷೆಯಿಂದ ಸಾಕಷ್ಟು ಪದಗಳು ಬಂದಿವೆ. ಜನರು ಸಾಮಾನ್ಯವಾಗಿ ಬಳಸುವ ಇಂಜಿಯರಿಂಗ್ ಎಂಬುದನ್ನು ‘ಅಭಿಯಂತರ’ ಎಂದು ತರ್ಜುಮೆ ಮಾಡಿದೆ ಸಂಸ್ಕೃತ ಆಗುತ್ತದೆಯಲ್ಲ, ಕನ್ನಡ ಬಳಕೆ ಹೇಗೆ ಸಾಧ್ಯ? ಎಂದು ಕೇಳಿದಾಗ, “ನೀವು ಹೇಳುವುದು ಸತ್ಯವಿದೆ. ಒಂದು ಸಮಿತಿ ಮಾಡಿದ್ದೇವೆ. ಕೆಲವು ಪದಗಳು ಕನ್ನಡಮಯ ಆಗಿ ಹೋಗಿವೆ. ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದರು.

ಮುಂದುವರಿದು, “ಸ್ಪರ್ಧೆಯಲ್ಲಿ ಯಾರು ಹೆಚ್ಚು ಕನ್ನಡ ಬಳಸುತ್ತಾರೆ, ಕಡಿಮೆ ಯಾರು ಬಳಸುತ್ತಾರೆ ಎಂಬುದನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಇರುವವರು ಪರಿಶೀಲಿಸುತ್ತಾರೆ. ನಾನು ಮಾತನಾಡುವಾಗಲೂ ಮಧ್ಯೆ ಮಧ್ಯೆ  ಇಂಗ್ಲಿಷ್‌ ಪದ ಬಳಸುತ್ತೇನೆ. ಆದರೂ ಹೆಚ್ಚು ಕನ್ನಡ ಪದಗಳನ್ನು ಬಳಸಿರುತ್ತೇನೆಲ್ಲವೇ? ಅದರ ಆಧಾರದಲ್ಲಿ ಸಮಿತಿ ನಿರ್ಧಾರ ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ‘ಶುದ್ಧ ಕನ್ನಡ ಪದಗಳ ಸ್ಪರ್ಧೆ’ ಒಕ್ಕಣೆ ಇರುವ ಪೋಸ್ಟರ್‌ ಕುರಿತು ಕೇಳಿದಾಗ, “ಶುದ್ಧ, ಅಶುದ್ಧ ಎನ್ನಲು ಸಾಧ್ಯವಿಲ್ಲ. ಕನ್ನಡ ಪದಗಳು ಯಾವುದೂ ಅಶುದ್ಧವಲ್ಲ. ಪೋಸ್ಟರ್‌ಅನ್ನು ಪರಿಶೀಲಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಏನಿದು ಸ್ಪರ್ಧೆ?

ಅನ್ಯಭಾಷೆಯ ಪದಗಳ ಬಳಕೆ ಮಾಡದೆ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತ ವಿಡಿಯೊ ಸೆಲ್ಫಿ ತೆಗೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಐದು ಸಾವಿರ ರೂ., ಮೂರು ಸಾವಿರ ರೂ. ಮತ್ತು ಎರಡು ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿತ್ತು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಿ ಅಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ರೂ. ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ. ನೀಡಲಾಗುತ್ತದೆ. ಅ.28ರೊಳಗೆ ವಿಡಿಯೋ ಕಳುಹಿಸಬೇಕು ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಫೇಸ್‌ಬುಕ್‌ ಪೇಜ್‌ನಲ್ಲಿ ‘ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ’ಯ ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು. ಸಚಿವ ಸುನೀಲ್‌ಕುಮಾರ್ ಭಾವಚಿತ್ರ, ಸರ್ಕಾರದ ಲೋಗೋವನ್ನು ಕಾಣಬಹುದಾಗಿತ್ತು.


ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...