Homeಕರ್ನಾಟಕ‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು `ಕನ್ನಡಕ್ಕಾಗಿ ನಾವು’ ಅಭಿಯಾನ ಆರಂಭಿಸಿದ್ದು, ಈ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿರುವ ‘ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ’ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್‌.ರಂಗಪ್ಪ ಮಾತನಾಡಿದ್ದರೆ.

“ಶುದ್ಧ, ಅಶುದ್ಧ ಎಂದು ಹೇಳಿಲ್ಲ. ಕನ್ನಡ ಭಾಷೆಯ ಕುರಿತು ನವೆಂಬರ್‌ ತಿಂಗಳು ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡ ಪದಗಳನ್ನೇ ಬಳಸಿ ಸ್ಪರ್ಧೆ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ಅದು ಆಯ್ಕೆ ಮಾಡುತ್ತದೆ. ಇಂಗ್ಲಿಷ್‌, ಹಿಂದಿ, ಉರ್ದು, ಮರಾಠಿ ಇದ್ಯಾವುದನ್ನೂ ಬಳಸದೆ ಮಾತನಾಡುವ ಸ್ಪರ್ಧೆ ಅದು” ಎದು ತಿಳಿಸಿದ್ದಾರೆ.

ಸಂಸ್ಕೃತ ಭಾಷೆಯಿಂದ ಸಾಕಷ್ಟು ಪದಗಳು ಬಂದಿವೆ. ಜನರು ಸಾಮಾನ್ಯವಾಗಿ ಬಳಸುವ ಇಂಜಿಯರಿಂಗ್ ಎಂಬುದನ್ನು ‘ಅಭಿಯಂತರ’ ಎಂದು ತರ್ಜುಮೆ ಮಾಡಿದೆ ಸಂಸ್ಕೃತ ಆಗುತ್ತದೆಯಲ್ಲ, ಕನ್ನಡ ಬಳಕೆ ಹೇಗೆ ಸಾಧ್ಯ? ಎಂದು ಕೇಳಿದಾಗ, “ನೀವು ಹೇಳುವುದು ಸತ್ಯವಿದೆ. ಒಂದು ಸಮಿತಿ ಮಾಡಿದ್ದೇವೆ. ಕೆಲವು ಪದಗಳು ಕನ್ನಡಮಯ ಆಗಿ ಹೋಗಿವೆ. ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದರು.

ಮುಂದುವರಿದು, “ಸ್ಪರ್ಧೆಯಲ್ಲಿ ಯಾರು ಹೆಚ್ಚು ಕನ್ನಡ ಬಳಸುತ್ತಾರೆ, ಕಡಿಮೆ ಯಾರು ಬಳಸುತ್ತಾರೆ ಎಂಬುದನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಇರುವವರು ಪರಿಶೀಲಿಸುತ್ತಾರೆ. ನಾನು ಮಾತನಾಡುವಾಗಲೂ ಮಧ್ಯೆ ಮಧ್ಯೆ  ಇಂಗ್ಲಿಷ್‌ ಪದ ಬಳಸುತ್ತೇನೆ. ಆದರೂ ಹೆಚ್ಚು ಕನ್ನಡ ಪದಗಳನ್ನು ಬಳಸಿರುತ್ತೇನೆಲ್ಲವೇ? ಅದರ ಆಧಾರದಲ್ಲಿ ಸಮಿತಿ ನಿರ್ಧಾರ ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ‘ಶುದ್ಧ ಕನ್ನಡ ಪದಗಳ ಸ್ಪರ್ಧೆ’ ಒಕ್ಕಣೆ ಇರುವ ಪೋಸ್ಟರ್‌ ಕುರಿತು ಕೇಳಿದಾಗ, “ಶುದ್ಧ, ಅಶುದ್ಧ ಎನ್ನಲು ಸಾಧ್ಯವಿಲ್ಲ. ಕನ್ನಡ ಪದಗಳು ಯಾವುದೂ ಅಶುದ್ಧವಲ್ಲ. ಪೋಸ್ಟರ್‌ಅನ್ನು ಪರಿಶೀಲಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಏನಿದು ಸ್ಪರ್ಧೆ?

ಅನ್ಯಭಾಷೆಯ ಪದಗಳ ಬಳಕೆ ಮಾಡದೆ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತ ವಿಡಿಯೊ ಸೆಲ್ಫಿ ತೆಗೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಐದು ಸಾವಿರ ರೂ., ಮೂರು ಸಾವಿರ ರೂ. ಮತ್ತು ಎರಡು ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿತ್ತು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಿ ಅಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ರೂ. ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ. ನೀಡಲಾಗುತ್ತದೆ. ಅ.28ರೊಳಗೆ ವಿಡಿಯೋ ಕಳುಹಿಸಬೇಕು ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಫೇಸ್‌ಬುಕ್‌ ಪೇಜ್‌ನಲ್ಲಿ ‘ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ’ಯ ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು. ಸಚಿವ ಸುನೀಲ್‌ಕುಮಾರ್ ಭಾವಚಿತ್ರ, ಸರ್ಕಾರದ ಲೋಗೋವನ್ನು ಕಾಣಬಹುದಾಗಿತ್ತು.


ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...