Homeಕರ್ನಾಟಕತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ ಇರುವ ಡೀಸೆಲ್‌ ಅನ್ನು ಕಳ್ಳತನ ಮಾಡಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ.

ಸೋಮವಾರ ಮುಂಜಾನೆ ಗುಬ್ಬಿ ಬಸ್ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಕಳವಾಗಿದೆ. ಬಸ್ ಚಾಲಕ ಹನುಮಂತರಾಯ ಭಾನುವಾರ ರಾತ್ರಿ 9.40 ರ ಸುಮಾರಿಗೆ ವಾಹನ ನಿಲ್ಲಿಸಿ (ಕೆಎ -06 ಎಫ್ -0888) ಕೆಎಸ್‌ಆರ್‌ಟಿಸಿ ವಸತಿ ನಿಲಯದಲ್ಲಿ ಮಲಗಲು ಹೋಗಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ಮತ್ತೆ ಗುಬ್ಬಿ ಬಸ್ ನಿಲ್ದಾಣಕ್ಕೆ ಹಿಂತಿರುಗಿದಾಗ, ಡಿಪೋದಿಂದ ಬಸ್ ಕಾಣೆಯಾಗಿದೆ. ಇದರ ನಂತರ ಅವರು ಪೊಲೀಸ್‌ ಠಾಣೆಗೆ ತೆರಳಿ ಘಟನೆ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ಬಸ್ಸಿನಲ್ಲಿ GPRS ವ್ಯವಸ್ಥೆ ಇರುವುದರಿಂದ ಗುಬ್ಬಿ ಬಸ್ ನಿಲ್ದಾಣದಿಂದ ಸುಮಾರು 30 ಕಿಮೀ ದೂರದಲ್ಲಿರುವ ಜನೇನಹಳ್ಳಿ ಬಳಿ ವಾಹನವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಕಳ್ಳರು ಡೀಸೆಲ್ ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಕಳ್ಳತನ ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. “ರಾತ್ರಿ ಸಮಯದಲ್ಲಿ ತಮ್ಮ ಪಾರ್ಕಿಂಗ್ ಪ್ರದೇಶಗಳಲ್ಲಿ ಗಸ್ತು ತಿರುಗಲು ವಸತಿ ಸಂಕೀರ್ಣಗಳಲ್ಲಿರುವ ಜನರು ನಮ್ಮನ್ನು ವಿನಂತಿಸುತ್ತಿದ್ದಾರೆ. ಈ ಹಿಂದೆ, ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಂತಹ ನಗರಗಳಲ್ಲಿ ಇಂಧನ ಕಳ್ಳತನ ಹೆಚ್ಚಾಗಿ ನಡೆಯುತ್ತಿತ್ತು. ಆದರೆ ಈಗ ಇಂತಹ ಪ್ರಕರಣಗಳು ಸಣ್ಣ ಪಟ್ಟಣಗಳಿಂದಲೂ ವರದಿಯಾಗುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ವರ್ಷದ ಆಗಸ್ಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ನಿಂದ ಡೀಸೆಲ್ ಕದಿಯುವ ಗ್ಯಾಂಗ್ ಅನ್ನು ಬಂಧಿಸಿದ್ದರು. ಈ ಗ್ಯಾಂಗ್‌ ಎಂಆರ್‌ಪಿಎಲ್‌ನ ಮುಖ್ಯ ಪೈಪ್‌ಲೈನ್‌ಗೆ ರಂಧ್ರವನ್ನು ಕೊರೆದು ಅಲ್ಲಿಂದ ಡೀಸೆಲ್ ಕದಿಯುತ್ತಿದ್ದರು. ಈ ಪ್ರಕರಣದಲ್ಲಿ ತಂಡದ ಆರು ಸದಸ್ಯರನ್ನು ಬಂಧಿಸಲಾಗಿದೆ.

ಬುಧವಾರದ ವೇಳೆಗೆ, ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 109.89 ರೂಪಾಯಿ ಆಗಿದ್ದರೆ, ಡೀಸೆಲ್‌ ಬೆಲೆ 100.75 ರೂಪಾಯಿಯಾಗಿದೆ.

ಇದನ್ನೂ ಓದಿ: ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...