Homeಕರ್ನಾಟಕಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

- Advertisement -
- Advertisement -

ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಅವರಿಗೆ ಬುದ್ದಿವಾದ ಹೇಳಿದ್ದಾರೆ.

ಮಂಗಳವಾರದಂದು ದೇಶದಾದ್ಯಂತ ಪ್ರವಾದಿ ಮೊಹಮ್ಮದರ ಹುಟ್ಟು ಹಬ್ಬವನ್ನು (ಈದ್‌ ಮಿಲಾದ್‌) ಆಚರಿಸಲಾಗಿತ್ತು. ಈ ಆಚರಣೆಯ ವೇಳೆ ಸಾಮಾನ್ಯವಾಗಿ ಮೆರವಣಿಗೆಯನ್ನು ನಡೆಸಲಾಗುತ್ತದೆ. ಇಂತಹದ್ದೇ ಮೆರವಣಿಗೆಯ ವಿಡಿಯೊವೊಂದನ್ನು ಸೂಲಿಬೆಲೆ ತನ್ನ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ವಿಡಿಯೊದಲ್ಲಿ, ಜನರು ಮೆರವಣಿಗೆ ಹೊರಟಿದ್ದು, ಅದರಲ್ಲಿ ಸಾಧಾರಣವಾಗಿ ಈದ್‌ ಮಿಲಾದ್‌ ದಿನ ಬಳಸುವ ಹಸಿರು ಧ್ವಜವನ್ನು ಬಳಸಲಾಗಿದೆ. ಅದರಲ್ಲಿ ಯಾವುದೇ ಸಂಘಟನೆಯದ್ದೋ, ಪಕ್ಷದ್ದೋ ಧ್ವಜ ಇರಲಿಲ್ಲ. ಮೆರವಣಿಗೆಯ ಪಕ್ಕದಲ್ಲೇ ಇಬ್ಬರು ಪುಟ್ಟ ಮಕ್ಕಳು ಕೇಸರಿ ಧ್ವಜವನ್ನು ಬೀಸಿಕೊಂಡು ಸೈಕಲ್ ಹೊರಡುತ್ತಾರೆ. ಅವರಿಗೆ ಯಾರು ಕೂಡಾ ತೊಂದರೆ ಮಾಡುವುದಿಲ್ಲ, ಜೊತೆಗೆ ಮಕ್ಕಳಿಬ್ಬರು ಸಹಜವಾಗಿ ಧ್ವಜಗಳನ್ನು ಬೀಸಿಕೊಂಡು ಹೋಗುತ್ತಾರೆ.

ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ, “ತುಂಬಾ ಜನರಿದ್ದಾರೆ ಎಂದು ಹೆದರಬೇಡಿ. ಕುರಿಗಳು ಗುಂಪಿನಲ್ಲಿ‌ ಹೋಗುತ್ತವೆ, ಸಿಂಹ ಏಕಾಂಗಿಯಾಗಿ ನಡೆಯುತ್ತದೆ” ಎಂದು ಬರೆದಿದ್ದಾರೆ. ಇಲ್ಲಿ ಮೆರವಣಿಗೆ ಹೊರಟಿರುವ ಜನರನ್ನು ಅವರು ಹಂಗಿಸಿ ಬರೆದಿದ್ದಾರೆ.

ಅವರ ಪೋಸ್ಟ್‌ಗೆ ಟ್ವಿಟರ್‌ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಬುದ್ದಿವಾದ ಹೇಳಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಭಾಸ್ಕರ್‌ ರಾವ್ ಅವರು, “ಬಡ ಮುಗ್ಧ ಮಕ್ಕಳನ್ನು ಪ್ರಚೋದನೆಗೆ ಬಳಸಬಾರದು. ನೀವು ಯಾವ ಸಂದೇಶವನ್ನು ಹೇಳಲು ಬಯಸುತ್ತಿದ್ದೀರಿ.ನೀವೊಬ್ಬರು ಐಕಾನ್ ಆಗಿದ್ದು, ದಯವಿಟ್ಟು ಧನಾತ್ಮಕ ಪದಗಳನ್ನು ಬಳಸಿ” ಎಂದು ಹೇಳಿದ್ದಾರೆ.

ಭಾಸ್ಕರ್‌ ರಾಮ್ ಅವರ ರೀಟ್ವೀಟ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆಯಾದರೂ, ಸೂಲಿಬೆಲೆ ಅವರನ್ನು ‘ಐಕಾನ್’ ಎಂದು ಸಂಬೋಧಿಸಿದ್ದಕ್ಕೆ ಆಕ್ಷೇಪ ಕೂಡಾ ವ್ಯಕ್ತವಾಗಿದೆ.

ಇದನ್ನೂ ಓದಿ: ನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ಹರೀಶ್ ಎನ್ನುವವರು, “ಮಾನ್ಯ ಭಾಸ್ಕರ್ ರಾವ್ ಸರ್, ನಿಮ್ಮ ಮೇಲೆ ಹಾಗೂ ನಿಮ್ಮ ಕರ್ತವ್ಯ ನಿಷ್ಠೆ ಮೇಲೆ ನಮಗೆ ಅಪಾರ ಗೌರವವಿದೆ. ದಯವಿಟ್ಟು ಇಂಥವರನ್ನು ICON ಎಂದು ಸಂಭೋದಿಸ ಬೇಡಿ. ಸುಳ್ಳೇ ಅವರ ಸರ್ವಸ್ವ. ಮಾರದಿಗಾಗಿ ಒಂದು ವಿಡಿಯೋ ಹಾಕಿದ್ದೇನೆ ನೋಡಿ ಆನಂದಿಸಿ. ಮತ್ತಷ್ಟು ವಿಡಿಯೋಗಳಿಗಾಗಿ ಹೆಂಗ್ ಪುಂಗ್ಲಿ ವೀಡಿಯೋಸ್ ಎಂದು ಸರ್ಚ್ ಮಾಡಿ ನೋಡಿ ಆನಂದಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮಿಥುನ್ ಶೇಟ್ ಅಲಿಯಾಸ್ ಚಕ್ರವರ್ತಿ ಸೂಲಿಬೆಲೆ ಲಿಂಗಾಯಿತರಾಗಲು ಹೊರಟಿದ್ದು, ಹಿಂಜರಿದಿದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...