Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...