Homeಮುಖಪುಟಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಸರ್ದಾರ್ ಉದಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ.

- Advertisement -
- Advertisement -

(ಈ ಲೇಖನ ಹೊಸ ಬರಹದಲ್ಲಿದೆ. ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

‘ಮದ್ರಾಸ್ ಕೆಫೆ’ಯಲ್ಲಿ ಸೋತಿದ್ದ ಶೂಜಿತ್ ಸರ್ಕಾರ್ ‘ಸರ್ದಾರ್ ಉದಮ್’ ನಲ್ಲಿ ಗೆದ್ದಿದ್ದಾನೆ.
ವಿಕಿ ಡೋನರ್, ಪಿಕು ನಂತಹ ಪಕ್ಕಾ ಮಧ್ಯಮವರ್ಗದ, ನಗರ ಪ್ರಜ್ಞೆಯ ಸಿನಿಮಾಗಳಲ್ಲಿ ತೇಲುತ್ತಿದ್ದ ಶೂಜಿತ್ ನಿಂದ ಇಂತಹ ರಾಜಕೀಯ ಸಿನಿಮಾ ಮಾಡುತ್ತಾನೆ ಎನ್ನುವ ನಿರೀಕ್ಷೆ ಇರಲಿಲ್ಲ.

ಮತ್ತು ‘ಉರಿ’ ಸಿನಿಮಾದ ಮೂಲಕ ಎಲ್ಲೋ ಒಂದೆಡೆ ಬಲಪಂಥೀಯನಂತೆ ವರ್ತಿಸುತ್ತಿದ್ದ ನಟ ವಿಕಿ ಕೌಸಲ್ ಇದರ ಪ್ರೊಟಗಾನಿಸ್ಟ್ ಆಗಿರುವುದೂ ಸಹ ನನಗೆ ಈ ಸಿನಿಮಾ ಅಂತಹ ಉತ್ಸಾಹ ಮೂಡಿಸಿರಲಿಲ್ಲ. ಆದರೆ ‘ಉದಮ್’ ಸಿನಿಮಾ ಚೆನ್ನಾಗಿದೆ.

ಚಿತ್ರಕತೆ ಬರೆದ ರಿತೇಶ್ ಶಾ ಮತ್ತು ಶುಬೇಂದು ಭಟ್ಟಾಚಾರ್ಯ ಈ ಸಿನಿಮಾದ ಗೆಲುವಿನ ಮುಖ್ಯ ರೂವಾರಿಗಳು. ಚಾರಿತ್ರಿಕ ಸಿನಿಮಾಗಳಿಗೆ ಒಂದು ಫಾರ್ಮ್, ನಿರಂತರ ಹರಿವು, ಕತೆಯ ಲಹರಿ ಮತ್ತು ಬಿಗಿಯಾದ ಬಂಧವನ್ನು ಕಟ್ಟಿಕೊಡಲು non – linear ಚಿತ್ರಕತೆ ಅಗತ್ಯ.

‘ಉದಮ್’ ನ ಆ non – linear ಚಿತ್ರಕತೆ ಇಡೀ ಸಿನಿಮಾವನ್ನು ಎಲ್ಲಿಯೂ ಜಾಳು ಜಾಳಾಗದಂತೆ ಪಾರು ಮಾಡಿದೆ. ಮತ್ತು ಈ ಸಿನಿಮಾದ ಬಹುಮುಖ್ಯ ಘಟ್ಟ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ದೃಶ್ಯಕ್ಕಾಗಿ ಪ್ರೇಕ್ಷಕ ಕಾತರಿಸುತ್ತಿದ್ದಾಗ ಅದನ್ನು ಕ್ಲೈಮ್ಯಾಕ್ಸ್ ನಲ್ಲಿ ತಂದು ದೀರ್ಘವಾದ ಶಾಟ್ ನ ಮೂಲಕ ಭಾವುಕತೆಯನ್ನು (ಚಾರಿತ್ರಿಕ ಸಿನಿಮಾಗಳಿಗೆ ಇದರಿಂದ ಮುಕ್ತಿಯಿಲ್ಲ) ತುಂಬಿರುವುದು ಸಹ ಚಿತ್ರಕತೆಯ ಯಶಸ್ಸು.

ಎರಡೂವರೆ ಗಂಟೆ ಗಾಢವಾದ ವಿಶಾದ ಮತ್ತು ನಿರ್ವಾತವನ್ನು ಮೀರುವ ತುಡಿತವನ್ನು ಉಂಟುಮಾಡುವ ಹಿನ್ನೆಲೆ ಸಂಗೀತ ಇಲ್ಲಿನ ಮುಖ್ಯ ಅಂಶ ಮತ್ತು ಬೆನ್ನೆಲುಬು.

ಮುಖ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು, ಕ್ರಾಂತಿಕಾರಿಗಳನ್ನು ಮನುಶ್ಯರಂತೆ ನಿರೂಪಿಸದೆ ಬದಲಿಗೆ ಅತ್ಯುನ್ನತ ಹೀರೋ ಎನ್ನುವ ವೈಬವೀಕರಣದ ಮೂಲಕ ಒಂದು ಬಲಪಂಥೀಯ ಸಂಕೇತವನ್ನು ನಿರ್ಮಿಸಿ ಬಿಡುವ ಅಪಾಯದಿಂದ ‘ಉದಮ್’ ಸಿನಿಮಾ ಪಾರಾಗಿದೆ. ಇದು ಶೂಜಿತ್ ನ ಗೆಲುವು ಮತ್ತು ಆ ಮೂಲಕ ಪ್ರಜಾಪ್ರಬುತ್ವದ ಗೆಲುವು.

ತೋಳ್ಬಲದ ದೇಶಪ್ರೇಮದ ಮೂಲಕ ಹೀರೋನನ್ನು ವಿಜೃಂಬಿಸಿ ಮಧ್ಯಮವರ್ಗದ ಆ ದ್ವೇಶದ ತೃಶೆಯನ್ನು ಹಿಂಗಿಸುವ ನಿರೂಪಣೆಯನ್ನು ಶೂಜಿತ್ ತಿರಸ್ಕರಿಸಿ ಉದಮ್ ಎನ್ನುವ ವ್ಯಕ್ತಿ ಮತ್ತು ಆ ಕಾಲಘಟ್ಟದ ಯಥಾವತ್ತಾದ ನಿರ್ಲಿಪ್ತ ನಿರೂಪಣೆ ಈ ಸಿನಿಮಾವು ಮತ್ತೊಂದು ಎದೆತಟ್ಚಿಕೊಳ್ಳುವ ಹುಸಿ ದೇಶಪ್ರೇಮಿಗಳ ಸಿನಿಮಾವಾಗುವುದರಿಂದ ಬಚಾವ್ ಮಾಡಿದೆ. ಇಂದಿನ ಫ್ಯಾಸಿಸಂ ಸಂದರ್ಬದಲ್ಲಿ ಜನಪರ ಸಿನಿಮಾದ ನಿಜ ಮಾದರಿಯನ್ನು ತೋರಿಸಿಕೊಟ್ಟಿದೆ.
ಕ್ರಾಂತಿಕಾರಿ ಮತ್ತು ಅವನ /ಅವಳ ಸಿದ್ದಾಂತ, ಅವರ ಸಂಗಾತಿಗಳು, ಅವರ ಖಾಸಗಿ ಬದುಕು ಎಲ್ಲವನ್ನೂ ಒಂದು ಸ್ಥಿತಪ್ರಜ್ಞತೆಯಲ್ಲಿ ನಿರೂಪಿತವಾಗಿದೆ.

ಭಾವುಕತೆಯೂ ಹುಸಿಯಾಗದಂತೆ ಮತ್ತು ಮುಖ್ಯವಾಗಿ ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುವ ತಾತ್ವಿಕತೆಗೆ ಬದ್ದರಾಗಿ non – linear ಚಿತ್ರಕತೆ ಬರೆದ ಶಾ ಮತ್ತು ಶುಬೇಂದು ಇಬ್ಬರಿಗೆ ಶರಣು. They done the job. ಮತ್ತು ಮುಖ್ಯವಾಗಿ ಇತಿಹಾಸದ ಗ್ರಹಿಕೆ, ನಿರ್ವಹಣೆ ಎರಡೂ ಹಳಿ ತಪ್ಪದಿರುವುದು ಈ ಸಿನಿಮಾದ ಶಕ್ತಿ.

ರೇಮಂಡ್ ವಿಲಿಯಮ್ ‘ವಿಚಾರಗಳಿಗೆ ಇತಿಹಾಸವಿದೆ ಎನ್ನುವುದು ಅಶ್ಟು ಸತ್ಯವಲ್ಲ. ಸಮಾಜಗಳಿಗೆ ಇತಿಹಾಸವಿದೆ. ಆಗ ವಿರುದ್ಧವಾಗಿರುವ ವಿಚಾರಗಳು ಕೊನೆಗೆ ಒಂದೇ ಸಾಮಾಜಿಕ ಪ್ರಕ್ರಿಯೆಯ ಬಾಗವಾಗುತ್ತವೆ’ ಎಂದು ಹೇಳುತ್ತಾನೆ. ‘ಉದಮ್’ ಸಿನಿಮಾದ ವಿಶಯದಲ್ಲಿಯೂ ಇದು ನಿಜವಾಗಿದೆ ಮತ್ತು ಇದು ಸಮಾಧಾನಕರ ಅಂಶ.

ಕ್ರಾಂತಿ ಎಂಬುದು ಅಂಹಿಸೆಯೂ ಅಥವಾ ಹಿಂಸೆಯೋ? ವೈರುದ್ಯಗಳಿವೆ. ಆದರೆ ಆ ವಿಚಾರಗಳು ಎಂದಿಗೂ ಇತಿಹಾಸವಲ್ಲ. ಭಗತ್ ಸಿಂಗ್, ಉದಮ್, ಗಾಂಧಿ, ನೆಹರೂ ಮುಂತಾದವರ ಆ ಸ್ವಾತಂತ್ರ್ಯ ಹೋರಾಟದ ಎಲ್ಲಾ ಪ್ರಕ್ರಿಯೆಗಳು ಮಾತ್ರ ಇತಿಹಾಸ. ಅವರ ವಿಚಾರಗಳಲ್ಲ.
ಆದರೆ ಬಲಪಂಥೀಯ ಮತಾಂದರು ವಿಚಾರಗಳನ್ನು ಇತಿಹಾಸ ಎಂದು ಬಿಂಬಿಸುವ ಆ ವಿನಾಶಕಾರಿ ಧೋರಣೆಯನ್ನು ತಬ್ಬಿಕೊಂಡಿದ್ದ ಬಾಲಿವುಡ್ ಸಿನಿಮಾಗಳಿಗಿಂತ ಸಂಪೂರ್ಣವಾಗಿ ಬಿನ್ನವಾಗಿ ನಿಲ್ಲುವ ‘ಸರ್ದಾರ್ ಉದಮ್’ ಈ ಕಾರಣಕ್ಕಾಗಿ ಮಹತ್ವದ ಸಿನಿಮಾ.

ಇತಿಹಾಸವನ್ನು ವ್ಯಕ್ತಿಯ ಮೂಲಕ ನೋಡದೆ ವ್ಯಕ್ತಿ ಮತ್ತು ಘಟನೆಗಳ ಕೊಲಾಜ್ ಮೂಲಕ ಗ್ರಹಿಸಿ ಶೂಜಿತ್ ನಮಗೆ ದೊಡ್ಡ ಉಪಕಾರ ಮಾಡಿದ್ದಾನೆ.

ವ್ಯಕ್ತಿಯನ್ನು iconicಗೊಳಿಸುವ, ದೇಶಪ್ರೇಮ ಭಾವುಕವಾಗುವ ದೃಶ್ಯಗಳಲ್ಲಿ ‘ಬ್ರೆಕ್ಟೇರಿಯನ್’ ತಂತ್ರ ಹೆಣೆದ ಶೂಜಿತ್ ಆ ಮೂಲಕ ಇಡೀ ಸಿನಿಮಾವನ್ನು ಎಲ್ಲರೂ ಒಂದಾಗಿ ಬಾಳುವ ದಡಕ್ಕೆ ತಂದಿದ್ದಾನೆ. ಇದೂ ಸಹ ಮುಖ್ಯ.

ಉದಾಹರಣೆಗೆ ಸ್ವಾತಂತ್ರ್ಯ ಬಂದ ನಂತರ ನೀನು ಏನು ಮಾಡುತ್ತೀ ಎಂದು ಪ್ರಶ್ನಿಸಿದಾಗ ಭಗತ್ ಸಿಂಗ್ ‘ನಾನು ಮೊದಲು ಚಾರ್ಲಿ ಚಾಪ್ಲಿನ್ ಸಿನಿಮಾ ನೋಡತೀನಿ, ವೈನ್ ಕುಡೀತೀನಿ, ಉಣತೀನಿ, ಮಲಗತೀನಿ’ ಅಂತಾನೆ. ಇದು ಬ್ರೆಕ್ಟೇರಿಯನ್ ತಂತ್ರ. ಒಬ್ಬ ಕ್ರಾಂತಿಕಾರಿ ನಮ್ಮಂತಿದ್ದಾನಲ್ಲ ಎನ್ನುವುದೇ ನಮಗೆ ಹೃದಯಂಗಮವಾಗಿ ತಟ್ಟುತ್ತದೆ. ಈ ಸಿನಿಮಾದಲ್ಲಿ ಇಂತಹ ಹಲವು ಬ್ರೆಕ್ಟೇರಿಯನ್ ದೃಶ್ಯಗಳಿವೆ.

ಇತಿಹಾಸವನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸುವಾಗ ಅದರ ಸಂಕೀರ್ಣತೆ, ವೈರುದ್ಯಗಳು, ಮತ್ತು ಸಾಂದರ್ಭಿಕ ಸನ್ನಿವೇಶಗಳನ್ನು ವಸ್ತುನಿಶ್ಟವಾಗಿ ನಿರೂಪಿಸಿರುವ ಶೂಜಿತ್ ಅನೇಕ ಮಿತಿಗಳ ನಡುವೆಯೂ ಗೆದ್ದಿದ್ದಾನೆ. ಮತ್ತು ಬಲಪಂಥೀಯರಿಗೆ ಎದೆ ತಟ್ಟಿಕೊಳ್ಳುವ ಅಥವಾ ದಾಳಿ ಮಾಡುವ ಎರಡೂ ಅವಕಾಶಗಳನ್ನು ಕೊಟ್ಟಿಲ್ಲ. ಇದೇನು ಕಡಿಮೆ ಸಾದನೆಯಲ್ಲ.

ಭಾರತವೆಂದರೇನು? ಭಾರತೀಯರೆಂದರೆ ಯಾರು ಎನ್ನುವ ಸಂಕೀರ್ಣತೆ ಎಲ್ಲಿಯೂ ಇತಿಹಾಸವಾಗದಂತೆ ಎಚ್ಚರ ವಹಿಸಿರುವ ಶೂಜಿತ್ ನಿಜಕ್ಕೂ ಅತ್ಯಂತ ಮಹತ್ವದ ಸಿನಿಮಾ ಕೊಟ್ಟಿದ್ದಾನೆ. ಅವನಿಗೆ ಥ್ಯಾಂಕ್ಸ್.

(ಈ ಚಿತ್ರ ಅಮೆಜಾನ್ ಪ್ರೈಮ್ ನಲ್ಲಿದೆ)


ಇದನ್ನೂ ಓದಿ: ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...