Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...