Homeಕರ್ನಾಟಕಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

ಕಣ್ಮರೆಯಾಗಿದ್ದ ಸಮುದ್ರ ಹವಾಮಾನ ಯಂತ್ರ ಹುಡುಕಿ ತಂದ ಉತ್ತರ ಕನ್ನಡದ ಮೀನುಗಾರರು

- Advertisement -
- Advertisement -

ಲಕ್ಷದ್ವೀಪದಲ್ಲಿ ಅಳವಡಿಸಲಾಗಿದ್ದ ಸಮುದ್ರ ಹವಾಮಾನದ ಮುನ್ಸೂಚನೆ ಕೊಡುವ ಅತ್ಯಾಧುನಿಕ ರಕ್ಷಣಾ ಸಂಶೋಧನಾ ಯಂತ್ರ (ಬೋಯ್) ಕಳೆದ ಅಕ್ಟೋಬರ್ 2ರಂದು ಕಾಣೆಯಾಗಿ ಆತಂಕ ಸೃಷ್ಟಿಯಾಗಿತ್ತು. ನಂತರ ಅದು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕಡಲಲ್ಲಿ ಕಾಣಿಸಿಕೊಂಡಿತ್ತಾದರು ಅದನ್ನು ದಡಕ್ಕೆ ತರಲು ನೌಕಾ ದಳ, ಕೋಸ್ಟ್ ಗಾರ್ಡ್ ಮತ್ತು ಕೇರಳ, ದಕ್ಷಿಣ ಕನ್ನಡದ ಮೀನುಗಾರರಿಂದಲೂ ಸಾಧ್ಯವಾಗಿರಲಿಲ್ಲ. ಆದರೆ ಮಹಾರಾಷ್ಟ್ರದ ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಉತ್ತರ ಕನ್ನಡದ ಕುಮಟಾದ ನಾಲ್ವರು ಬೆಸ್ತರು ಬೋಯ್ ಅನ್ನು ಸುರಕ್ಷಿತವಾಗಿ ತಮ್ಮ ಬೋಟ್‌ನಲ್ಲಿ ಹಾಕಿಕೊಂಡು ಕಾರವಾರದ ಸಾಗರ ವಿಜ್ಞಾನ ಕೇಂದ್ರದ ಅಧಿಕಾರಿಗಳಿಗೆ ಕೊಟ್ಟಿದ್ದಾರೆ! ಅಲ್ಲಿಗೆ ರಾಷ್ರೀಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಲಕ್ಷದ್ವೀಪ ನಡುಗಡ್ಡೆಯ 15\69 ಅಕ್ಷಾಂಶ-ರೇಖಾಂಶದಲ್ಲಿ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರ ಬೋಯ್ ಸ್ಥಾಪಿಸಿತ್ತು. ಈ ಅತ್ಯಾಧುನಿಕ ಯಂತ್ರ ಸಾಗರದಲ್ಲಿನ ಗಾಳಿಯ ದಿಕ್ಕು, ವೇಗ, ಉಷ್ಣತೆ ಮತ್ತು ತೇವಾಂಶ ತಿಳಿಸುತ್ತದೆ; ಸಮುದ್ರ ಮಟ್ಟದ ಒತ್ತಡ ಮತ್ತು ನೀರಿನ ಡೌನ್ ವೆಲ್ಲಿಂಗ್ ಹೇಳುತ್ತದೆ. ನೀರಿನ ಮೇಲ್ಪದರದಿಂದ 500 ಮೀಟರ್ ಆಳದ ವರೆಗಿನ ನೀರಿನ ಉಷ್ಣತೆ ಮತ್ತು ಉಪ್ಪಿನಾಂಶವನ್ನು ಅಳೆಯುತ್ತದೆ. ನೀರಿನ ಒಳಹರಿವಿನ ದಿಕ್ಕನ್ನು 240 ಮೀಟರ್ ವರೆಗೆ ಅಳತೆ ಮಾಡಬಲ್ಲದು. ಈ ಮಾಹಿತಿಯನ್ನೆಲ್ಲ ಬೋಯ್ ತಾಸಿಗೊಮ್ಮೆ ಉಪಗ್ರಹದ ಮೂಲಕ ಚೆನ್ನೈನ ರಾಷ್ಟ್ರೀಯ ಸಾಗರ ವಿಜ್ಞಾನ ಕೇಂದ್ರಕ್ಕೆ ರವಾನಿಸುತ್ತದೆ. ಇಂಥ 12 ಯಂತ್ರಗಳನ್ನು ದೇಶದ ವಿವಿಧ ಸಮುದ್ರ ಪ್ರದೇಶದಲ್ಲಿ ಅಳವಡಿಸಲಾಗಿದ್ದು, ಸದ್ರಿ ನೆಟ್‌ವರ್ಕ್ ದೇಶದ ಮಹತ್ವದ ಸಾಗರ ಸ್ಥಿತಿ-ಗತಿ ಒದಗಿಸುತ್ತದೆ. ಬೋಯ್ ಸಿಗದಿದ್ದರೆ ದುರುಪಯೋಗವಾಗುವ ಭಯವಿತ್ತು. ಉತ್ತರ ಕನ್ನಡದ ಮೀನುಗಾರರ ಸಾಹಸದಿಂದ ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆವರಿಸಿದ್ದ ಆತಂಕ ದೂರಾದಂತಾಗಿದೆ.

PC : TV9 Kannada

ಅಕ್ಟೋಬರ್ 2ರಂದು ಬೋಯ್ ಇದ್ದಕ್ಕಿದ್ದಂತೆ ಲಕ್ಷದ್ವೀಪದಿಂದ ಕಳಚಿಕೊಂಡು ಸಮುದ್ರ ಪಾಲಾಗಿತ್ತು. ಅ.5ರಂದು ಕೇರಳದ ಅರಬ್ಭೀ ಸಮುದ್ರದಲ್ಲಿ ತೇಲುತ್ತಿದ್ದ ಈ ಯಂತ್ರ ಅ.13ರಂದು ಕುಮಟಾದ ಧಾರೇಶ್ವರ ಕಡಲಲ್ಲಿ ಕಾಣಿಸಿಕೊಂಡಿತ್ತು. ಕೋಸ್ಟ್‌ಗಾರ್ಡ್ ಸಿಬ್ಬಂದಿ ದೂರದಿಂದಲೆ ನೋಡಿ ಇದನ್ನು ದಡಕ್ಕೆ ತರುವುದು ಕಷ್ಟವೆಂದು ವಾಪಸ್ಸಾಗಿತ್ತು. ದಕ್ಷಿಣ ಕನ್ನಡದ ಮೀನುಗಾರರ ಕಣ್ಣಿಗೂ ಬಿದ್ದಿದ್ದ ಬೋಯ್ ತರಲಾಗಿರಲಿಲ್ಲ. ಅ.14ರಂದು ಕಾರವಾರದ ಸೀ ಬರ್ಡ್ ನೌಕಾನೆಲೆಯ ಆಳ ಸಮುದ್ರ ಪ್ರದೇಶದಲ್ಲಿತ್ತು. ಆದರೆ ನೌಕಾ ಪಡೆಯವರಿಂದಲೂ ಈ ಅಮೂಲ್ಯ ಯಂತ್ರ ಹಿಡಿಯಲಾಗಿರಲಿಲ್ಲ! ಅ.16ರಂದು ಮಹಾರಾಷ್ಟ್ರದ ಮಾಲ್ವನ್ ಸಾಗರದಲ್ಲಿ ಬೋಯ್ ಇರುವುದು ಚೆನ್ನೈ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಗೆ ತಿಳಿದಿತ್ತು.

ಬೋಯ್ ಕಡಲಲ್ಲಿ ಕಣ್ಣು ತಪ್ಪಿಸಿ ಓಡಾಡಿಕೊಂಡಿರವುದನ್ನು ಚೆನ್ನೈ ಎನ್‌ಐಓಟಿ ಅರಬ್ಬೀ ಸಮುದ್ರದಂಚಿನಲ್ಲಿರುವ ಸಾಗರ ವಿಜ್ಞಾನ ಕೇಂದ್ರಗಳಿಗೆ ತಿಳಿಸಿ, ಅದನ್ನು ದಂಡೆಗೆ ತರುವ ಪ್ರಯತ್ನ ಮಾಡುವಂತೆ ಹೇಳಿತ್ತು. ಕಾರವಾದ ಸಾಗರ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಜಗನ್ನಾಥ ರಾಠೋಡ್ ಈ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ಮತ್ತು ಮೀನುಗಾರರ ವಾಟ್ಸ್‌ಪ್ ಗ್ರೂಪ್‌ಗಳಿಗೆ ಹಂಚಿಕೊಂಡಿದ್ದರು. ಮಾಲ್ವನ್ ಕಡಲಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಕಾರವಾರದ ಮೂಲದ ಬೋಟ್‌ನಲ್ಲಿದ್ದ ಕುಮಟಾದ ರಾಜು ಅಂಬಿಗ, ಚಂದ್ರು ಅಂಬಿಗ, ಗೋಪಾಲ್ ಅಂಬಿಗ ಮತ್ತು ಗಿರೀಶ್ ಅಂಬಿಗ ದೊಡ್ಡ ಗಾತ್ರದ ಬೋಯ್ ತಮ್ಮೆದುರು ತೇಲುತ್ತಿರುವುದನ್ನು 18ರಂದು ಕಾರವಾರ ಸಾಗರ ವಿಜ್ಞಾನ ಕೇಂದ್ರದ ಮುಖ್ಯಸ್ಥ ರಾಠೋಡ್‌ರಿಗೆ ಪೋನ್ ಮಾಡಿ ಹೇಳಿದ್ದಾರೆ. ಅದರ ಮಹತ್ವ ತಿಳಿಸಿದ ರಾಠೋಡ್ ಹೇಗಾದರೂ ಮಾಡಿ ದಂಡೆಗೆ ತನ್ನಿರಿ ಎಂದಿದ್ದಾರೆ.

ಆ ನಾಲ್ಕು ಬೆಸ್ತರು ಮೀನುಗಾರಿಕೆ ನಿಲ್ಲಿಸಿ ದೇಶದ ಮಹತ್ವದ ಬೋಯ್ ಹಿಡಿಯಲು ಪ್ರಯತ್ನಿಸಿದ್ದಾರೆ. ಮಹಾರಾಷ್ಟ್ರದ ಮೀನುಗಾರರ ನೆರವಿಂದ ಬೃಹತ್ ಬೋಯ್ ಬೋಟಿಗೆ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆಗೆ ಕಾರವಾರದ ಸಾಗರ ವಿಜ್ಞಾನ ಸಂಸ್ಥೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಉತ್ತರ ಕನ್ನಡದ ಮೀನುಗಾರರ ಈ ಸಾಹಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ!


ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...