Homeಮುಖಪುಟಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

- Advertisement -
- Advertisement -

ದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಅವರೆ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು.

ಈಗ ಸಲಗ ಸಿನೆಮಾ ಬಿಡುಗಡೆಯಾಗಿದ್ದು ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾದ ಯಾವ ಭಾಗದಲ್ಲೂ ಮಂಚಿಕೇರಿ ಸಾವ್ಕಾರ್ ಅಂದರ್ ಬುಲಾಯಾ… ದರ್ವಾಜಾ ಲಗಾಯಾಟಿಣಿಂಗ ಮಿಣಿಂಗ ಟಿಶ್ಯಾ.. ಹಾಡಿಲ್ಲವೇ ಇಲ್ಲ. ಈ ಹಾಡು ಸಲಗ ಸಿನಿಮಾದ್ದು ಎಂಬುದಕ್ಕಿಂತ ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿಜಾ ಸಿದ್ದಿ ತಂಡ ಹಾಡಿ ನೃತ್ಯ ಮಾಡಿದೆ ಎಂಬುದೆ ಹೆಚ್ಚು ಪ್ರಚಾರಕ್ಕೆ ಕಾಣವಾಗಿತ್ತು.

ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದಾರೆ. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದಾರೆ. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣ. ಸಲಗ ಸಿನಿಮಾ ತಂಡದ ತಾತ್ಸಾರದಿಂದ ತಮಗೆ ಅವಮಾನ ಮಾಡಿದಂತಾಗಿದೆಯೆಂದು ಸಿದ್ದಿ ಯುವಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಶಿಷ್ಟ ಸಂಸ್ಕೃತಿಯ ಸಿದ್ದಿ ಸಮುದಾಯದ ಪ್ರತಿಭೆ, ಮುಗ್ದತೆ ಸಿನಿಮಾ ಪ್ರಪಂಚ ಪ್ರಚಾರದ ಸರಕಾಗಿ ಬಳಸಿಕೊಂಡಿದೆಯೆಂಬ ಮಾತೀಗ ಕೇಳಿಬರುತ್ತಿದೆ.

ಉತ್ತರ ಕನ್ನಡದಲ್ಲಿರುವ ಆಫ್ರಿಕಾದ ನಿಗ್ರೊ ಮೂಲದ ಸಿದ್ದಿ ಬುಡಕಟ್ಟು ಜನಾಂಗಕ್ಕೆ ಅದರದೇ ಆದ ಸಂಸ್ಕ್ರತಿ, ಸಾಹಿತ್ಯ, ಕಲೆ, ಸಂಗೀತ, ಹಾಡು ಆಚರಣೆಗಳಿವೆ. ಮದುವೆ, ಹಬ್ಬ, ಉತ್ಸವ ಮುಂತಾದ ವಿಶೇಷ ಸಂದರ್ಭದಲ್ಲಿ ಜಾನಪದ ಶೈಲಿಯ ಹಾಡು ಹಾಡಿ, ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಸಿದ್ದಿಗಳ ಡಮಾಮಿ ಕುಣಿತಕ್ಕಂತೂ ಚೆತೋಹಾರಿ ಸೊಬಗಿದೆ.

ಕಾಡಿನ ವಾಸಿಗಳಾದ ಸಿದ್ದಿಗಳ ವಿಶಿಷ್ಟ ಹಾಡುಗಳೀಗ ಸಾಮಾಜಿಕ ಜಾಲತಾಣಕ್ಕೂ ವ್ಯಾಪಿಸಿ ಮೆಚ್ಚಿಗೆ ಗಳಿಸುತ್ತಿದೆ. ಈ ಬೆನ್ನಲ್ಲೆ ಸಿದ್ದಿ ಹಾಡೊಂದನ್ನು ಖ್ಯಾತ ನಟ ದುನಿಯಾ ವಿಜಯ್ ನಟನೆಯ ಸಲಗ ಸಿನಿಮಾಕ್ಕೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿತ್ತು.

ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಸಿದ್ದಿ ಹಾಡನ್ನು ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ತಂಡ ತುಂಬಾ ಆಕರ್ಷಕವಾಗಿ ಹಾಡಿದೆ. ಜೊತೆಗೆ ಅಭಿನಯವನ್ನೂ ಮಾಡಿದ್ದಾರೆ. ಎ2 ಮ್ಯೂಸಿಕ್ ಕಂಪನಿ ಸಿದ್ದಿ ಕಲಾವಿದರು ಹಾಡಿರುವ ಹಾಡನ್ನು ಯೂ ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡನ್ನು ಈಗಾಗಲೇ 8 ಲಕ್ಷ ಜನರು ನೋಡಿದ್ದಾರೆ. ಸಿದ್ದಿಗಳ ಕಲೆಗೆ ಸಿಕ್ಕಿರುವ ಈ ಮನ್ನಣೆ ದಾಖಲೆಯೇ ಸರಿ.


ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...