Homeಮುಖಪುಟದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

"ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ - ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ!" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -
- Advertisement -

“ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ – ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ! ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳೋಣ ಬನ್ನಿ. ದ್ವೇಷ ಸಾಕು, ಪ್ರೀತಿ ಬೇಕು. ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ”.. ಇವಿಷ್ಟು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಂಡುಬಂದ ಮತ್ತು ಕೇಳಿಬಂದ ಘೋಷಣೆಗಳು.

ಕ್ರಿಯೆಗೆ ಪ್ರತಿಕ್ರಿಯೆ ಕೊಡುವುದು ವಿನಾಶಕ್ಕೆ ಕರೆದೊಯ್ಯುತ್ತದೆ. ಬಸವಣ್ಣನನ್ನೆ ಮರೆತ ಬೊಮ್ಮಾಯಿ, ಸಾಂವಿಧಾನಿಕ ಮೌಲ್ಯಗಳನ್ನು ಮರೆತ ಮುಖ್ಯಮಂತ್ರಿ. ಜಾತಿ ಧರ್ಮದ ಹೆಸರಿನಲ್ಲಿ ಕಗ್ಗೊಲೆ ಸಾಕು ಎಂಬ ಘೋಷಣೆಗಳ ಮೂಲಕ ನೂರಾರು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರಾದ ವಿನಯ್ ಶ್ರೀನಿವಾಸ್, “ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡಿದರು. ನನ್ನ ಬದ್ಧತೆ ಸಂವಿಧಾನಕ್ಕೆ, ಈ ನಾಡಿನಲ್ಲಿ ಯಾವುದೇ ಒಂದು ವರ್ಗಕ್ಕೆ ಒಲವು ತೋರಿಸದೆ ಎಲ್ಲ ವರ್ಗಕ್ಕೂ ನ್ಯಾಯ ಸಿಗುವಂತೆ ಆಡಳಿತ ನಡೆಸುತ್ತೇನೆ, ಸಂವಿಧಾನದ ಮೌಲ್ಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ ಅವು ಇಂದು ಮಾಡುತ್ತಿರುವುದು ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಯುವಕ-ಯುವತಿಯರು ಒಂದು ಐಸ್ ಕ್ರೀಂ ತಿನ್ನಲು ಸಹ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಜಾತಿ-ಧರ್ಮ ನೋಡಲಾಗುತ್ತಿದೆ. ಬಜರಂಗದಳ, ವಿಎಚ್‌ಪಿ ಗೂಂಡಾಗಳ ಕಿರುಕುಳದಿಂದ ಯುವಕ ಯುವತಿಯರು ತಮ್ಮಿಷ್ಟ ಬಂದವರ ಜೊತೆ ಸ್ನೇಹ ಮಾಡುವಂತಿಲ್ಲ, ಅವರಿಗೆ ತಮಗಿಷ್ಟ ಬಂದವರನ್ನು ಪ್ರೀತಿ ಮಾಡುವ ಹಕ್ಕಿಲ್ಲದಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್


ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹ ಅಗತ್ಯ ಎಂದಿದ್ದರು. ಆದರೆ ಇಂದು ಅಂತರ್ಜಾತಿ ಮದುವೆಗೆ ಕಲ್ಲು ಹಾಕುತ್ತಿದ್ದಾರೆ. ಜನರ ನಡುವೆ ಜಾತಿ ಧರ್ಮದ ಗೋಡೆ ಕಟ್ಟುತ್ತಿದ್ದಾರೆ. ಮಹಿಳೆಯರ ಮೇಲೆ ದಾಳಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರು ಯಾರೊಂದಿಗೆ ಸ್ನೇಹ ಮಾಡಬೇಕು, ಯಾರೊಂದಿಗೆ ಮದುವೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತಿದ್ದಾರೆ. ಏಕೆ ಮಹಿಳೆಯರಿಗೆ ಜ್ಞಾನವಿಲ್ಲವೇ? ಸ್ವಾತಂತ್ರ್ಯವಿಲ್ಲವೇ? ಮಹಿಳೆಯರು ಏನು ಮಾಡಬೇಕೆಂದು ತೀರ್ಮಾನಿಸಲು ಇವರ್ಯಾರು ಎಂದು ಕಿಡಿಕಾರಿದರು.

ನಿಮ್ ತಲೇಲಿ ಬೂಸಾ ತುಂಬಿಕೊಂಡಿದೆ. ನೀವು ಬೇರೆಯವರಿಗೆ ಪಾಠ ಮಾಡಬೇಡಿ. ಕರ್ನಾಟಕದಲ್ಲಿ ದ್ವೇಷ ತುಂಬಿಸುತ್ತಿದ್ದಾರೆ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಅಪೌಷ್ಠಿಕತೆ ತುಂಬಿಕೊಂಡಿದೆ. ಇದರ ಬಗ್ಗೆ ಸಮೀಕ್ಷೆ ಮಾಡಲು ಯಾರು ಮುಂದೆ ಬಂದಿಲ್ಲ, ಆದರೆ ಚರ್ಚ್‌ಗಳ ಸಮೀಕ್ಷೆ ಮಾಡುತ್ತೇವೆ, ಅಲ್ಲಿ ಮತಾಂತರ ತಡೆಯುತ್ತೇವೆ ಎಂದು ಗೂಂಡಾಗಿರಿ ಮಾಡುತ್ತಿದ್ದಾರೆ. ಇವರು ಅಶ್ಪೃಶ್ಯತೆ ನಿಲ್ಲಿಸಲು, ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಲು ಏನು ಮಾಡಿದ್ದಾರೆ? ಬೆಂಗಳೂರಿನಲ್ಲಿ ಸ್ಲಂ ಜನರಿಗೆ ಏನು ಸಹಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಲು ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು. ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿಹಿಡಿಲಾಗುತ್ತೆಂದು ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ವೋಚ್ಛ ನ್ಯಾಯಾಲಯವು ಅಂತರ್ಜಾತಿ ಮತ್ತು ಅಂತರ್‌ ಧರ್ಮೀಐ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು “ನೈತಿಕ ಪೊಲೀಸ್‌ಗಿರಿ” ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...