Homeಮುಖಪುಟದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

ದ್ವೇಷ ಸಾಕು, ಪ್ರೀತಿ ಬೇಕು: ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ

"ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ - ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ!" ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -
- Advertisement -

“ಮಾರ್ಗರೇಟ್ ರಾಮಾಚಾರಿ ಸುಖವಾಗಿ ಬಾಳಲು ಆಗಿಲ್ಲ – ಇನ್ನು ಮುಂದು ಪ್ರೀತಿಗೆ ಯಾರು ಅಡ್ಡ ಬರಬಾರದು, ಸರ್ಕಾರ ಕೂಡ! ಸರ್ವ ಜನಾಂಗದ ಶಾಂತಿಯ ತೋಟವನ್ನು ಉಳಿಸಿಕೊಳ್ಳೋಣ ಬನ್ನಿ. ದ್ವೇಷ ಸಾಕು, ಪ್ರೀತಿ ಬೇಕು. ಮುಖ್ಯಮಂತ್ರಿಗಳೇ, ತಮ್ಮ ಬದ್ಧತೆ ಸಂವಿಧಾನದ ಮೌಲ್ಯಗಳಿಗಿರಲಿ”.. ಇವಿಷ್ಟು ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸಿಕೊಳ್ಳುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಂಡುಬಂದ ಮತ್ತು ಕೇಳಿಬಂದ ಘೋಷಣೆಗಳು.

ಕ್ರಿಯೆಗೆ ಪ್ರತಿಕ್ರಿಯೆ ಕೊಡುವುದು ವಿನಾಶಕ್ಕೆ ಕರೆದೊಯ್ಯುತ್ತದೆ. ಬಸವಣ್ಣನನ್ನೆ ಮರೆತ ಬೊಮ್ಮಾಯಿ, ಸಾಂವಿಧಾನಿಕ ಮೌಲ್ಯಗಳನ್ನು ಮರೆತ ಮುಖ್ಯಮಂತ್ರಿ. ಜಾತಿ ಧರ್ಮದ ಹೆಸರಿನಲ್ಲಿ ಕಗ್ಗೊಲೆ ಸಾಕು ಎಂಬ ಘೋಷಣೆಗಳ ಮೂಲಕ ನೂರಾರು ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರಾದ ವಿನಯ್ ಶ್ರೀನಿವಾಸ್, “ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡಿದರು. ನನ್ನ ಬದ್ಧತೆ ಸಂವಿಧಾನಕ್ಕೆ, ಈ ನಾಡಿನಲ್ಲಿ ಯಾವುದೇ ಒಂದು ವರ್ಗಕ್ಕೆ ಒಲವು ತೋರಿಸದೆ ಎಲ್ಲ ವರ್ಗಕ್ಕೂ ನ್ಯಾಯ ಸಿಗುವಂತೆ ಆಡಳಿತ ನಡೆಸುತ್ತೇನೆ, ಸಂವಿಧಾನದ ಮೌಲ್ಯಗಳಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದರು. ಆದರೆ ಅವು ಇಂದು ಮಾಡುತ್ತಿರುವುದು ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಯುವಕ-ಯುವತಿಯರು ಒಂದು ಐಸ್ ಕ್ರೀಂ ತಿನ್ನಲು ಸಹ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಜಾತಿ-ಧರ್ಮ ನೋಡಲಾಗುತ್ತಿದೆ. ಬಜರಂಗದಳ, ವಿಎಚ್‌ಪಿ ಗೂಂಡಾಗಳ ಕಿರುಕುಳದಿಂದ ಯುವಕ ಯುವತಿಯರು ತಮ್ಮಿಷ್ಟ ಬಂದವರ ಜೊತೆ ಸ್ನೇಹ ಮಾಡುವಂತಿಲ್ಲ, ಅವರಿಗೆ ತಮಗಿಷ್ಟ ಬಂದವರನ್ನು ಪ್ರೀತಿ ಮಾಡುವ ಹಕ್ಕಿಲ್ಲದಂತಹ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಮತೀಯ ಗೂಂಡಾಗಿರಿ ಸಮರ್ಥನೆ ಹೇಳಿಕೆ ಹಿಂಪಡೆಯಿರಿ: ಸಿಎಂ ಬೊಮ್ಮಾಯಿಗೆ ನೋಟೀಸ್


ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹ ಅಗತ್ಯ ಎಂದಿದ್ದರು. ಆದರೆ ಇಂದು ಅಂತರ್ಜಾತಿ ಮದುವೆಗೆ ಕಲ್ಲು ಹಾಕುತ್ತಿದ್ದಾರೆ. ಜನರ ನಡುವೆ ಜಾತಿ ಧರ್ಮದ ಗೋಡೆ ಕಟ್ಟುತ್ತಿದ್ದಾರೆ. ಮಹಿಳೆಯರ ಮೇಲೆ ದಾಳಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರು ಯಾರೊಂದಿಗೆ ಸ್ನೇಹ ಮಾಡಬೇಕು, ಯಾರೊಂದಿಗೆ ಮದುವೆಯಾಗಬೇಕು ಎಂಬುದನ್ನು ನಿಯಂತ್ರಿಸುತ್ತಿದ್ದಾರೆ. ಏಕೆ ಮಹಿಳೆಯರಿಗೆ ಜ್ಞಾನವಿಲ್ಲವೇ? ಸ್ವಾತಂತ್ರ್ಯವಿಲ್ಲವೇ? ಮಹಿಳೆಯರು ಏನು ಮಾಡಬೇಕೆಂದು ತೀರ್ಮಾನಿಸಲು ಇವರ್ಯಾರು ಎಂದು ಕಿಡಿಕಾರಿದರು.

ನಿಮ್ ತಲೇಲಿ ಬೂಸಾ ತುಂಬಿಕೊಂಡಿದೆ. ನೀವು ಬೇರೆಯವರಿಗೆ ಪಾಠ ಮಾಡಬೇಡಿ. ಕರ್ನಾಟಕದಲ್ಲಿ ದ್ವೇಷ ತುಂಬಿಸುತ್ತಿದ್ದಾರೆ. ಕೋವಿಡ್‌ನಿಂದ ಜನ ಸಾಯುತ್ತಿದ್ದಾರೆ. ಅಪೌಷ್ಠಿಕತೆ ತುಂಬಿಕೊಂಡಿದೆ. ಇದರ ಬಗ್ಗೆ ಸಮೀಕ್ಷೆ ಮಾಡಲು ಯಾರು ಮುಂದೆ ಬಂದಿಲ್ಲ, ಆದರೆ ಚರ್ಚ್‌ಗಳ ಸಮೀಕ್ಷೆ ಮಾಡುತ್ತೇವೆ, ಅಲ್ಲಿ ಮತಾಂತರ ತಡೆಯುತ್ತೇವೆ ಎಂದು ಗೂಂಡಾಗಿರಿ ಮಾಡುತ್ತಿದ್ದಾರೆ. ಇವರು ಅಶ್ಪೃಶ್ಯತೆ ನಿಲ್ಲಿಸಲು, ದಲಿತರ ಮೇಲೆ ದೌರ್ಜನ್ಯ ತಡೆಗಟ್ಟಲು ಏನು ಮಾಡಿದ್ದಾರೆ? ಬೆಂಗಳೂರಿನಲ್ಲಿ ಸ್ಲಂ ಜನರಿಗೆ ಏನು ಸಹಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಲು ತಾವು ಹೇಳಿದ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚನೆ ಮಾಡಬೇಕು. ರಾಜ್ಯ ಸರ್ಕಾರವು ಸಂವಿಧಾನವನ್ನು ಎತ್ತಿಹಿಡಿಲಾಗುತ್ತೆಂದು ಹಾಗೂ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟಲು ಮತ್ತು ಅಂತಹ ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷಿಸಲು ಕ್ರಮ ಕೈಗೊಳ್ಳಲಾಗುವುದೆಂದು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ವೋಚ್ಛ ನ್ಯಾಯಾಲಯವು ಅಂತರ್ಜಾತಿ ಮತ್ತು ಅಂತರ್‌ ಧರ್ಮೀಐ ವಿವಾಹಗಳನ್ನು ರಕ್ಷಿಸಲು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ಅಂತಹ ವಿವಾಹಿತ ವ್ಯಕ್ತಿಗಳ ವಿರುದ್ಧ ನಡೆಯುವ ಹಿಂಸೆ, ಮರ್ಯಾದಾ ಹತ್ಯೆಗಳು ಮತ್ತು “ನೈತಿಕ ಪೊಲೀಸ್‌ಗಿರಿ” ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ: ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...