Homeಚಳವಳಿದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

ದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ದಲಿತ ಯುವಕ ಅರುಣ್ ಕುಮಾರ್ ವಾಲ್ಮೀಕಿ ಅವರ ಲಾಕಪ್ ಡೆತ್‌ಗೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಅಪರಿಚಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ಜಗದೀಶ್ ಪುರ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಆರೋಪದ ಮೇಲೆ ಠಾಣೆಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್‌ ವಾಲ್ಮೀಕಿ (30) ಎಂಬುವವರನ್ನು ಮಂಗಳವಾರ ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಆಸ್ಪತ್ರೆಗೆ ತೆರಳುವಷ್ಟರಲ್ಲೇ ಸಾವನ್ನಪ್ಪಿದ್ದರು. ಪೊಲೀಸರ ಥಳಿತದಿಂದಲೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಈ ಘಟನೆ ಬೆಳಕಿಗೆ ಬಂದ ನಂತರ ಜಗದೀಶ್ ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಸೆಕ್ಷನ್ 302 ರ ಪ್ರಕಾರ ಅಪರಿಚಿತರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರಿಯಾಂಕ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಮಹಿಳಾ ಪೊಲೀಸರ ವಿರುದ್ದ ತನಿಖೆಗೆ ಆದೇಶ”

’ಮೃತ ದಲಿತ ವ್ಯಕ್ತಿ ತಾನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಅವರ ಮನೆಯಿಂದ 15 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ನಂತರ ಗುರುತು ಸಿಗಬಾರದು ಎಂದು ಅರುಣ್ ತಲೆ ಬೋಳಿಸಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ವಶದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಕಾರಣ, ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಆದೇಶಿಸಲಾಗಿದೆ. ಮೃತ ವ್ಯಕ್ತಿಯ ಸಹೋದರ ರಿಂಕು ದೂರಿನ ಮೇರೆಗೆ ಜಗದೀಶಪುರ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ವಿಚಾರಣೆಯ ವೇಳೆ ಪೊಲೀಸರ ದೌರ್ಜನ್ಯದಿಂದಾಗಿ ಅರುಣ್ ಕುಮಾರ್‌ ವಾಲ್ಮೀಕಿ ಮೃತಪಟ್ಟಿದ್ದಾರೆ ಎಂದು ಸಹೋದರ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ರಾತ್ರಿ ಮೃತ ಅರುಣ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವ ಹತ್ತಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಕರೆದುಕೊಂಡು ಹೋಗಿ, ತೀವ್ರವಾಗಿ ಥಳಿಸಿದ್ದಾರೆ ಎಂದು ಕುಟುಂಬ ಸದಸ್ಯರು ಪ್ರಿಯಾಂಕಾಗೆ ತಿಳಿಸಿದ್ದಾರೆ. ಪೊಲೀಸರು ಚಿತ್ರಹಿಂಸೆ ನೀಡಿದ್ದರಿಂದಲೇ ಅರುಣ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಕೂಡ ಸಂತ್ರಸ್ತ ಕುಟುಂಬವನ್ನು ಭೇಟಿಯಾದರು. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೂಡ ಘಟನೆಯನ್ನು ಖಂಡಿಸಿದ್ದಾರೆ.

ಆಗ್ರಾ ಜಿಲ್ಲೆಯ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ಶನಿವಾರ ರಾತ್ರಿ ‘ಮಾಲ್ಖಾನ'(ಜಪ್ತಿ ಮಾಡಿದ ವಸ್ತುಗಳನ್ನು ಪೊಲೀಸರು ಸಂಗ್ರಹಿಸಿ ಇರಿಸುವ ಸ್ಥಳ) ದಿಂದ ಎರಡು ಪಿಸ್ತೂಲ್ ಮತ್ತು 25 ಲಕ್ಷ ರೂಪಾಯಿಗಳನ್ನು ಕಳ್ಳತನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿತ್ತು. ಬಳಿಕ ದಲಿತ ಯುವಕ ಅರುಣ್ ಕುಮಾರ್‌ ವಾಲ್ಮೀಕಿಯನ್ನು ಕಳ್ಳತನದ ಆರೋಪದಲ್ಲಿ ಬಂಧಿಸಲಾಗಿತ್ತು.


ಇದನ್ನೂ ಓದಿ: ಯುಪಿ: ಪೊಲೀಸ್‌ ಠಾಣೆಯಿಂದಲೇ 25 ಲಕ್ಷ ರೂ. ನಗದು ಮತ್ತು 2 ಪಿಸ್ತೂಲ್ ಕಳವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...