Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...