Homeಚಳವಳಿರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಹೆದ್ದಾರಿಗಳ‌ನ್ನು ತಡೆಹಿಡಿದಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ. ’ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಹೀಗೆ ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ರೈತರು ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಗಳಿಂದ ರೈತರ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೋರಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನೊಯ್ಡಾ ನಿವಾಸಿ ಮೋನಿಕಾ ಅಗರವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿಯಲ್ಲಿ, ಮೊದಲು ದಿಲ್ಲಿಯನ್ನು ತಲುಪಲು 20 ನಿಮಿಷಗಳಾಗುತ್ತಿತ್ತು. ಆದರೆ, ಈಗ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಜೊತೆಗೆ ಯುಪಿ ಗೇಟ್ ಬಳಿಯ ಪ್ರತಿಭಟನೆಗಳಿಂದಾಗಿ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದಿದ್ದರು.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ನ್ಯಾಯಪೀಠವು, ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಅ.26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಅಲ್ಲದೆ, ಪ್ರತಿಭಟನೆಗೆ ತೆರವಿಗೆ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈತ ಸಂಘಟನೆಗಳಿಗೆ ಮೂರು ವಾರಗಳ ಸಮಯವನ್ನು ಕೋರ್ಟ್‌ ನೀಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7 ರಂದು ಮುಂದೂಡಿದೆ.

“ಕಾಯ್ದೆಗಳ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಿರುವಾಗಲೂ ರೈತರ ಪ್ರತಿಭಟಿಸುವ ಹಕ್ಕನ್ನು ನಾವು ವಿರೋಧಿಸುವುದಿಲ್ಲ. ಆದರೆ ರಸ್ತೆಗಳನ್ನು ಹೀಗೆ ಅನಿರ್ಧಿಷ್ಟಾವಧಿಗೆ ನಿರ್ಬಂಧಿಸಲು ಸಾಧ್ಯವಿಲ್ಲ. ನೀವು ಯಾವುದೇ ರೀತಿಯಲ್ಲಿ ಆಂದೋಲನ ಮಾಡುವ ಹಕ್ಕನ್ನು ಹೊಂದಿದ್ದೀರಿ. ಆದರೆ ರಸ್ತೆಗಳನ್ನು ಈ ರೀತಿ ನಿರ್ಬಂಧಿಸಬಾರದು. ಜನರಿಗೆ ರಸ್ತೆಗಳಲ್ಲಿ ಸಂಚರಿಸಲು ಹಕ್ಕಿದೆ. ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಪೀಠವು ಹೇಳಿದೆ.

ಈ ಹಿಂದೆ ಸೆಪ್ಟಂಬರ್‌ 30 ರಂದು ಇದೇ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಪೀಠ, “ಸಮಸ್ಯೆಗಳ ಪರಿಹಾರವು ನ್ಯಾಯಾಂಗ ಸ್ವರೂಪ, ಆಂದೋಲನ ಅಥವಾ ಸಂಸತ್ತಿನ ಚರ್ಚೆಗಳ ಮೂಲಕ ಮಾಡಬಹುದು. ಆದರೆ, ಹೆದ್ದಾರಿಗಳನ್ನು ಹೇಗೆ ನಿರ್ಬಂಧಿಸಬಹುದು..? ಅದು ಶಾಶ್ವತವಾಗಿ ಹೇಗೆ ಸಾಧ್ಯ…? ಇದು ಯಾವಾಗ ಕೊನೆಗೊಳ್ಳುತ್ತದೆ..?” ಎಂದು ಪ್ರಶ್ನಿಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...