Homeಕರ್ನಾಟಕನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

- Advertisement -
- Advertisement -

2012 ರಲ್ಲಿ ನಕ್ಸಲ್ ನಿಗ್ರಹ ದಳದಿಂದ ಬಂಧಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯರನ್ನು, ಮೂರನೇ ಹೆಚ್ಚುವರಿ ನ್ಯಾಯಾಲಯವು ಗುರುವಾರ ನಿರ್ದೋಷಿ ಎಂದು ತೀರ್ಪು ನೀಡಿದೆ. ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದಲ್ಲಿ ವಿಠಲ ಮಲೆಕುಡಿಯ ಬಂಧನಕ್ಕೆ ಒಳಗಾಗುವ ವೇಳೆ ಅವರು ಮಂಗಳೂರು ವಿಶ್ವವಿದ್ಯಾನಿಯಲದ ಪತ್ರಿಕೋಧ್ಯಮದ ವಿದ್ಯಾರ್ಥಿಯಾಗಿದ್ದರು. ಜೈಲಿನಲ್ಲಿದ್ದಾಗ ಅವರು ಕಾಲೇಜಿಗೆ ಪರೀಕ್ಷೆ ಬರೆಯಲು ಕೈಯ್ಯಲ್ಲಿ ಬೇಡಿ ಹಾಕಿಕೊಂಡೆ ಬಂದಿದ್ದರು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ವಿಠಲ ಮಲೆಕುಡಿಯ ನಕ್ಸಲ್ ಚಟುವಟಿಕೆ ಮಾಡುತ್ತಿದ್ದರು ಎಂದು ಆರೋಪಿಸಿ ಅವರ ವಿರುದ್ದ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಮಯದಲ್ಲಿ ವಿಠಲ ಅವರು ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸುವ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟ ನಡೆಸುತ್ತಿದ್ದರು. ಬಂಧನಕ್ಕೆ ಒಳಗಾಗಿ ಮೂರು ತಿಂಗಳ ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ: ನಾಪತ್ತೆಯಾಗಿದ್ದ ಮಲೆಕುಡಿಯ ಆದಿವಾಸಿ ಯುವತಿಯ ಶವ ಕಾಡಿನಲ್ಲಿ ಪತ್ತೆ

ನಕ್ಸಲ್ ನಿಗ್ರಹ ದಳವು ಅವರನ್ನು ಬಂಧಿಸಿದಾಗ ಅವರು ತನ್ನ ಮನೆಯಲ್ಲಿ ಭಗತ್‌ ಸಿಂಗ್ ಪುಸ್ತಕ ಹೊಂದಿದ್ದರು ಎಂದು ಮುಖ್ಯವಾಗಿ ಆರೋಪಿಸಿದ್ದರು. ಆದರೆ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಭಗತ್ ಸಿಂಗ್ ಸಾಹಿತ್ಯ ಓದುವುದು ಅಪರಾಧ ಅಲ್ಲ ಎಂದು ಒಪ್ಪಿಕೊಂಡಿದ್ದರು.

ಈ ಬಗ್ಗೆ ತನ್ನ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಅಂತಿಮವಾಗಿ ನ್ಯಾಯಾಲಯ ನ್ಯಾಯ ಒದಗಿಸಿದೆ. ಸರಕಾರಕ್ಕೆ ಮುಖಭಂಗವಾಗಿದೆ. ವಕೀಲ ದಿನೇಶ್ ಹೆಗ್ಡೆ ನ್ಯಾಯಾಲಯದಲ್ಲಿ ಉಚಿತವಾಗಿ ವಾದ ಮಂಡಿಸಿದ್ದರು. ಮಾಧ್ಯಮಗಳು ಅಂದು ನಮ್ಮ ಜೊತೆ ನಿಂತಿದ್ದವು. ಎಲ್ಲರಿಗೂ ಡಿವೈಎಫ್ಐ ರಾಜ್ಯ ಸಮಿತಿ ಕೃತಜ್ಞತೆ ಸಲ್ಲಿಸುತ್ತದೆ. ಕುಲದೀಪ್ ನಯ್ಯರ್ ಬರೆದ ಭಗತ್ ಸಿಂಗ್ ಪುಸ್ತಕ, ಧರ್ಮಸ್ಥಳದ ಜಾತ್ರೆಯಲ್ಲಿ ಖರೀದಿಸಿದ್ದ ಆಟಿಕೆ ಬೈನಾಕುಲರ್, ನೂರು ಗ್ರಾಂ ಕಾಮತ್ ಕಾಫಿ ಪುಡಿ, ಕಾಲು ಕೆ ಜಿ ಸಕ್ಕರೆ, ಎರಡು ಸ್ಟೀಲ್ ತಟ್ಟೆಯನ್ನು ಇಟ್ಟು ಯುಎಪಿಎ ಕಾಯ್ದೆಯಡಿ ಆದಿವಾಸಿ ವಿದ್ಯಾರ್ಥಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಸರಕಾರಕ್ಕೆ ಈಗ ನಾಚಿಕೆ ಆಗಬೇಕು” ಎಂದು ಕಿಡಿ ಕಾಡಿದ್ದಾರೆ.

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಘಟನಾ ಸಮಿತಿಯು “ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ.

ಒಂಬತ್ತು ವರ್ಷಗಳ ಹಿಂದೆ ವಿಠಲ ಮತ್ತು ಅವರ ತಂದೆಯನ್ನು ನಕ್ಸಲೈಟ್ ಎಂದು ಆರೋಪಿಸಿ ಬಂಧಿಸಿದ್ದಾಗ ಡಿವೈಎಫ್ಐ ಸಂಘಟನೆ ಅವರ ಪರವಾಗಿ ಬೃಹತ್‌ ಹೋರಾಟಗಳನ್ನು ಸಂಘಟಿಸಿತ್ತು. ಅವರ ಹೋರಾಟವನ್ನು ಬೆಂಬಲಿಸಿ ಪ್ರಸ್ತುತ ಕೇರಳ ವಿಧಾನಸಭೆಯ ಸ್ಪೀಕರ್‌ ಆಗಿರುವ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ ನೀಡಿ ವಿಠಲ ಮಲೆಕುಡಿಯ ಮತ್ತು ಅವರ ತಂದೆ ನಿಂಗಣ್ಣ ಮಲೆಕುಡಿಯರಿಗೆ ಧೈರ್ಯ ತುಂಬಿದ್ದರು.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...