Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...