Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...