Homeಚಳವಳಿರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ...

ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ವಾರ ಹತ್ಯೆಯಾದ ದಲಿತ ಯುವಕ ಲಖ್ಬೀರ್‌ ಸಿಂಗ್‌ ಅವರ ಚೀಮಾ ಕಲಾನ್ ಗ್ರಾಮಕ್ಕೆ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ.

ಕಳೆದ ತಿಂಗಳಲ್ಲಿ ಹಲವು ಬಾರಿ ನಿಹಾಂಗ್‌ ಸಿಖ್‌ಗಳು ಚೀಮಾ ಕಲಾನ್ ಗ್ರಾಮಕ್ಕೆ ಭೇಟಿ ನೀಡಿದ್ದರು ಎಂಬ ವಿಷಯ ಹೊರಬಂದಿದೆ. ಹತ್ಯೆಯಾ‌ದ ಮೂರು ದಿನಗಳ ಮೊದಲು ಲಖ್ಬೀರ್ ಸಿಂಗ್‌, ಬೊಲೆರೊ ಕ್ಯಾಂಪರ್ ಕಾರಿನಲ್ಲಿ ಇಬ್ಬರು ನಿಹಾಂಗ್‌ಗಳೊಂದಿಗೆ ಕಾಣಿಸಿಕೊಂಡಿರುವುದಾಗಿ ಗ್ರಾಮದ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳುಗಳಿಂದ ಕೊಲೆ ಆರೋಪಿ ಸರಬ್ಜಿತ್ ಸಿಂಗ್, ಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೊಲೆರೊ ಕ್ಯಾಂಪರ್ ಕಾರು ಓಡಿಸುತ್ತಿದ್ದನ್ನು ದೃಡಪಡಿಸಿದ್ದಾರೆ. ಜೊತೆಗೆ ಮೃತ ಲಖ್ಬೀರ್ ಸಿಂಗ್ ಸಹೋದರಿ ರಾಜ್ ಕೌರ್ ಕೂಡ ತನ್ನ ಸಹೋದರ ಸಿಂಘು ಗಡಿಗೆ ತಾನಾಗಿಯೇ ಹೋಗಲು ಸಾಧ್ಯವಿಲ್ಲ. ಅಲ್ಲಿ ಯಾರೋ ಆಮಿಷವೊಡ್ಡಿದ್ದರು ಎಂದು ನಿರಂತರವಾಗಿ ಹೇಳಿಕೆ ನೀಡಿದ್ದಾರೆ ಎಂದು ದಿ ಕಾರವಾನ್ ವರದಿ ಮಾಡಿದೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ಬಂಧಿತ ಆರೋಪಿ ಸರಬ್ಜಿತ್ ಸಿಂಗ್‌ ಹತ್ಯೆಯ ಜವಾಬ್ದಾರಿಯನ್ನು ವಹಿಸಿಕೊಂಡು ಅಕ್ಟೋಬರ್ 15 ರ ರಾತ್ರಿ ಪೊಲೀಸರಿಗೆ ಶರಣಾಗಿದ್ದರು. ಮರುದಿನ, ಇನ್ನೊಬ್ಬ ನಿಹಾಂಗ್ ಸಿಖ್ ನರೇನ್ ಸಿಂಗ್ ಅಮೃತಸರದ ಅಮರ್ಕೋಟ್ ಗ್ರಾಮದಲ್ಲಿ ಪೊಲೀಸರಿಗೆ ಶರಣಾದ ನಂತರ ಆತನನ್ನು ಬಂಧಿಸಲಾಗಿತ್ತು.

“ದಲಿತ ಯುವಕ ಲಖ್ಬೀರ್‌ ಸಿಂಗ್ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ನರೇನ್ ಸಿಂಗ್ ನೋಡಿಲ್ಲ. ಆತ ಕೇವಲ ಸರಬ್ಜಿತ್ ಸಿಂಗ್‌ ಮಾತಿನಂತೆ ನಡೆದುಕೊಂಡಿರುವುದಾಗಿ ತಿಳಿಸಿದ್ದಾರೆ” ಎಂದು ನರೇನ್ ಸಿಂಗ್‌ರನ್ನು ಬಂಧಿಸಿದ ಅಮೃತಸರ ಗ್ರಾಮಾಂತರ ಠಾಣೆಯ ಹಿರಿಯ ಅಧೀಕ್ಷಕ ರಾಕೇಶ್ ಕೌಶಲ್ ಹೇಳಿದ್ದಾರೆ.

ಮತ್ತೊಬ್ಬ ಚೀಮಾ ಕಲಾನ್ ಗ್ರಾಮದ ನಿವಾಸಿ ಮಾತನಾಡಿ, ಈ ಮೊದಲು ಸರಾಯಿ ಅಮಾನತ್ ಖಾನ್ ಪೊಲೀಸ್ ಠಾಣೆಯ ಬಳಿ ಸುಮಾರು ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಸರಬ್ಜಿತ್ ಅವರನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾರೆ.

“ಬಂಧನದಲ್ಲಿರುವ ಈ ಬಾಬಾ ಜೀ ಸರಬ್ಜಿತ್ ಸಿಂಗ್ ಅವರನ್ನು ನಾವು ನಮ್ಮ ಹಳ್ಳಿಯಲ್ಲಿ ಮೊದಲೇ ನೋಡಿದೆವು. ನಿನ್ನೆ, ನಾನು ಈ ವ್ಯಕ್ತಿಯ ವೀಡಿಯೋವನ್ನು ನೋಡುತ್ತಿದ್ದಾಗ ಎಲ್ಲ ನೆನಪಾಯಿತು. ಹಳ್ಳಿಯಲ್ಲಿ ಈ ಮನುಷ್ಯ ಯಾರದೋ ಕಾರನ್ನು ಓಡಿಸುವುದನ್ನು ನಾನು ನೋಡಿದ್ದೆ. ಆದರೆ, ಅದು ಯಾರ ಕಾರು ಎಂದು ನನಗೆ ತಿಳಿದಿಲ್ಲ” ಎಂದಿದ್ದಾರೆ.

ಮೃತನ ಕುಟುಂಬಸ್ಥರು ಮತ್ತು ಚೀಮಾ ಕಲಾನ್ ಗ್ರಾಮಸ್ಥರು

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ಹಳ್ಳಿಯ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ ಲಂಗರ್ ಹಾಲ್ ಹತ್ತಿರ ಅನೇಕ ಸಂದರ್ಭಗಳಲ್ಲಿ ಅನೇಕ ಗ್ರಾಮಸ್ಥರು ಸರಬ್ಜಿತ್ ಸಿಂಗ್‌ರನ್ನು ನೋಡಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಹಳ್ಳಿಯ ಹೊರ ಭಾಗದಲ್ಲಿ   ಕೈ-ಪಂಪ್‌ ಬಳಿ ಸರಬ್ಜಿತ್ ಸ್ನಾನ ಮಾಡುವುದನ್ನು ಸ್ಥಳೀಯರು ಸಹ ಗಮನಿಸಿದ್ದಾರೆ. ಕೆಲವು ಗ್ರಾಮಸ್ಥರು ಸರಬ್ಜಿತ್ ತಮ್ಮ ಹಳ್ಳಿಗೆ ಬಂದ ನಂತರ ತಮ್ಮ ಕೂದಲನ್ನು ಬೆಳೆಯಲು ಆರಂಭಿಸಿದ್ದರು. ಅವರು ಗುಜರಾತಿ, ಮರಾಠಿ ಮತ್ತು ಇತರ ಕೆಲವು ಭಾಷೆಗಳನ್ನು ಮಾತನಾಡುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಅಕ್ಟೋಬರ್ 12 ರಂದು ಲಖ್ಬೀರ್ ಹತ್ತಿರದ ಧಾನ್ಯ ಮಾರುಕಟ್ಟೆಗೆ ಕೆಲಸಕ್ಕಾಗಿ ಹೋಗಿದ್ದರು. ಆದರೆ, ಮದ್ಯವ್ಯಸನಿಯಾಗಿದ್ದ ಅವರಿಗೆ ಕೆಲಸ ಮಾಡಲು ಅಲ್ಲಿನ ಗುರುಶಿಖ್ ಎಂದು ಕರೆಸಿಕೊಳ್ಳುವವರು ಬಿಡಲಿಲ್ಲ. ನಂತರ ಅವರು ಅಲ್ಲಿದಂ ವಾಪಾಸ್ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಲಖ್ಬೀರ್‌ನನ್ನು ಕರೆದುಕೊಂಡು ಹೋಗಿ ಕಾರಿನಲ್ಲಿ ಕುಳಿತಿದ್ದ ನಿಹಾಂಗ್‌ಗಳ ಬಳಿಗೆ ಬಿಟ್ಟರ ಎಂದು ಸ್ಥಳೀಯರು ಹೇಳಿದ್ದಾರೆ. ಆ ರಾತ್ರಿ ಲಖ್ಬೀರ್‌ ಸಿಂಗ್‌ ಗೋಶಾಲೆಯಲ್ಲಿ ಜಾನುವಾರುಗಳಿಗೆ ಆಹಾರವನ್ನು ನೀಡುವುದನ್ನು ನೋಡಿದ್ದೇವೆ ಎಂದಿದ್ದಾರೆ.

ಮರುದಿನ ಬೆಳಿಗ್ಗೆ, ಲಖ್ಬೀರ್ ಸಿಂಗ್ ಧಾನ್ಯ ಮಾರುಕಟ್ಟೆಯಲ್ಲಿ ಕೆಲಸ ಮಾಡುವುದನ್ನು ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಹಳ್ಳಿಯ ನಿವಾಸಿ ಅಮೃತಪಾಲ್ ಸಿಂಗ್ ನೋಡಿದ್ದಾರೆ. “ನಾನು ಅವನನ್ನು ದೂರದಿಂದ ನೋಡಿದೆ” ಎಂದು ಅಮೃತಪಾಲ್ ಹೇಳಿದ್ದಾರೆ. ಅವರೇ ಹಳ್ಳಿಯಲ್ಲಿ ಕೊನೆಯ ಬಾರಿಗೆ ಲಖ್ಬೀ‌ರ್‌ ಸಿಂಗ್‌ ಅವರನ್ನು ನೋಡಿದವರು. ಲಖ್ಬೀ‌ರ್‌ ಸಿಂಗ್‌ ಅಕ್ಟೋಬರ್ 14 ರ ರಾತ್ರಿ ಸಿಂಘು ಗಡಿಯನ್ನು ಹೇಗೆ ತಲುಪಿದರು ಎಂಬುದು ಯಾರಿಗೂ ತಿಳಿದಿಲ್ಲ.

ಒಟ್ಟಾರೆ, ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರ ಪ್ರತಿಭಟನೆಯನ್ನು ಮುರಿಯಲು ಸರ್ಕಾರ ನಡೆಸುತ್ತಿರುವ ಪಿತೂರಿ ಎಂದಿರುವ ರೈತರ ಆರೋಪಕ್ಕೆ ಈ ಎಲ್ಲಾ ಘಟನೆಗಳು ಸಾಕ್ಷಿಯಾಗುತ್ತಿವೆ. ಇದರ ಜೊತೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದು ಕೂಡ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ, ಲಖ್ಬೀರ್‌ ಸಿಂಗ್‌ ಬಗ್ಗೆ ಎಲ್ಲಿಯೂ ಮಾತನಾಡದಂತೆ ಸ್ಥಳೀಯ ರಾಜಕೀಯ ವ್ಯಕ್ತಿಗಳು ಮತ್ತು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ ಸೋನು ಚೀಮಾ ಆರೋಪಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...