Homeಮುಖಪುಟ’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

- Advertisement -
- Advertisement -

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಬಾಲಿವುಡ್ ಚಿತ್ರೋದ್ಯಮದಲ್ಲಿ ಸುಲಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿ, ’ನಾನು ನನ್ನ ಸ್ವಂತ ಹಣದಲ್ಲಿ, ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’ ಎಂದಿದ್ದಾರೆ.

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿರುವ ಎನ್‌ಸಿಬಿ, ಬಾಲಿವುಡ್ ಸೆಲೆಬ್ರಿಟಿಗಳನ್ನು ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದೆ. ಇದು ಮಹಾರಾಷ್ಟ್ರ ಸರ್ಕಾರದ ಹೆಸರು ಹಾಳು ಮಾಡಲು ಒಕ್ಕೂಟ ಸರ್ಕಾರ ನಡೆಸುತ್ತಿರುವ ಪಿತೂರಿ ಎಂದು ಸಚಿವ ಆರೋಪಿಸಿದ್ದಾರೆ.

“ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಗುರುವಾರ ಒತ್ತಾಯಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

NDTVಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ, “ನಾನು ದುಬೈಗೆ ಹೋಗಿಲ್ಲ. ನಾನು ಮಾಲ್ಡೀವ್ಸ್‌ಗೆ ಹೋಗಿದ್ದೆ. ನಾನು ನನ್ನ ಮಕ್ಕಳೊಂದಿಗೆ, ಕಾನೂನುಬದ್ಧ ಅನುಮತಿಯೊಂದಿಗೆ ಮತ್ತು ನನ್ನ ಸ್ವಂತ ಹಣದಲ್ಲಿ ಹೋಗಿದ್ದೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿಯೊಂದಿಗೆ ಮಾಲ್ಡೀವ್ಸ್‌ಗೆ ಹೋಗಿಲ್ಲ. ಮಕ್ಕಳೊಂದಿಗೆ ಹೋಗಿದ್ದೆ. ಅದು ಲಾಕ್‌ಡೌನ್ ಸಮಯ ಮುಗಿದ ಮೇಲೆ ಒಂದೆರಡು ತಿಂಗಳ ಹಿಂದೆ ಭೇಟಿ ನೀಡಿದ್ದೆ” ಎಂದಿದ್ದಾರೆ. ಸಚಿವ ನವಾಬ್ ಮಲಿಕ್, ಸಮೀರ್ ವಾಂಖೆಡೆ ಅವರ ಸಹೋದರಿ ಮಾಲ್ಡೀವ್ಸ್‌ನಲ್ಲಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

’ನವಾಬ್ ಮಲಿಕ್ ಅವರು ರಾಜ್ಯದ ಮಂತ್ರಿಯಾಗಿದ್ದು, ಅವರು ಆಡಳಿತ ವ್ಯವಸ್ಥೆ ಹೊಂದಿದ್ದಾರೆ. ಹೀಗಾಗಿ ತನಿಖೆ ಮಾಡಬಹುದು. ಈ ಆರೋಪಗಳಿಗೆ ಸಾಕ್ಷಿಯಿದ್ದರೆ ಅದನ್ನು ತೋರಿಸಲಿ. ಅದು ಬಿಟ್ಟು ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಕಳೆದ 15 ದಿನಗಳಿಂದ ನಮ್ಮ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ನನ್ನ ಮೃತ ತಾಯಿ, ಸಹೋದರಿ ಮತ್ತು ನಿವೃತ್ತ ತಂದೆಯ ಮೇಲೆ ದಾಳಿ ನಡೆಯುತ್ತಿವೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು NCB ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು. ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...