Homeಮುಖಪುಟ’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

’ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’: ನವಾಬ್ ಮಲಿಕ್ ಸುಲಿಗೆ ಆರೋಪಕ್ಕೆ NCB ಅಧಿಕಾರಿ ಸಮೀರ್ ವಾಂಖೆಡೆ ಉತ್ತರ

- Advertisement -
- Advertisement -

ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಬಾಲಿವುಡ್ ಚಿತ್ರೋದ್ಯಮದಲ್ಲಿ ಸುಲಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿ, ’ನಾನು ನನ್ನ ಸ್ವಂತ ಹಣದಲ್ಲಿ, ಮಕ್ಕಳೊಂದಿಗೆ ಮಾಲ್ಡೀವ್ಸ್‌ಗೆ ಹೋಗಿದ್ದೆ’ ಎಂದಿದ್ದಾರೆ.

ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಿರುವ ಎನ್‌ಸಿಬಿ, ಬಾಲಿವುಡ್ ಸೆಲೆಬ್ರಿಟಿಗಳನ್ನು ಡ್ರಗ್ಸ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದೆ. ಇದು ಮಹಾರಾಷ್ಟ್ರ ಸರ್ಕಾರದ ಹೆಸರು ಹಾಳು ಮಾಡಲು ಒಕ್ಕೂಟ ಸರ್ಕಾರ ನಡೆಸುತ್ತಿರುವ ಪಿತೂರಿ ಎಂದು ಸಚಿವ ಆರೋಪಿಸಿದ್ದಾರೆ.

“ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಬಿಜೆಪಿಯ ಆಜ್ಞೆಯಂತೆ ವರ್ತಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಇಡೀ ಚಿತ್ರೋದ್ಯಮ ಮಾಲ್ಡೀವ್ಸ್‌ನಲ್ಲಿತ್ತು. ಈ ವೇಳೆ ಮಾಲ್ಡೀವ್ಸ್ ಮತ್ತು ದುಬೈನಲ್ಲಿ ಅಧಿಕಾರಿ ಮತ್ತು ಅವರ ಕುಟುಂಬ ಏನು ಮಾಡುತ್ತಿತ್ತು? ಇದನ್ನು ಸಮೀರ್ ವಾಂಖೆಡೆ ಸ್ಪಷ್ಟಪಡಿಸಬೇಕು” ಎಂದು ನವಾಬ್ ಮಲಿಕ್ ಗುರುವಾರ ಒತ್ತಾಯಿಸಿದ್ದರು.

ಇದನ್ನೂ ಓದಿ: ಡ್ರಗ್ಸ್ ಕೇಸ್‌ನಲ್ಲಿ ಬಿಜೆಪಿ ಕೈವಾಡವಿದೆ ಎಂದು ಕಿಡಿ ಕಾರಿದ ಎನ್‌ಸಿಪಿ ನಾಯಕ ನವಾಬ್ ಮಲಿಕ್

NDTVಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ, “ನಾನು ದುಬೈಗೆ ಹೋಗಿಲ್ಲ. ನಾನು ಮಾಲ್ಡೀವ್ಸ್‌ಗೆ ಹೋಗಿದ್ದೆ. ನಾನು ನನ್ನ ಮಕ್ಕಳೊಂದಿಗೆ, ಕಾನೂನುಬದ್ಧ ಅನುಮತಿಯೊಂದಿಗೆ ಮತ್ತು ನನ್ನ ಸ್ವಂತ ಹಣದಲ್ಲಿ ಹೋಗಿದ್ದೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿಯೊಂದಿಗೆ ಮಾಲ್ಡೀವ್ಸ್‌ಗೆ ಹೋಗಿಲ್ಲ. ಮಕ್ಕಳೊಂದಿಗೆ ಹೋಗಿದ್ದೆ. ಅದು ಲಾಕ್‌ಡೌನ್ ಸಮಯ ಮುಗಿದ ಮೇಲೆ ಒಂದೆರಡು ತಿಂಗಳ ಹಿಂದೆ ಭೇಟಿ ನೀಡಿದ್ದೆ” ಎಂದಿದ್ದಾರೆ. ಸಚಿವ ನವಾಬ್ ಮಲಿಕ್, ಸಮೀರ್ ವಾಂಖೆಡೆ ಅವರ ಸಹೋದರಿ ಮಾಲ್ಡೀವ್ಸ್‌ನಲ್ಲಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದರು.

’ನವಾಬ್ ಮಲಿಕ್ ಅವರು ರಾಜ್ಯದ ಮಂತ್ರಿಯಾಗಿದ್ದು, ಅವರು ಆಡಳಿತ ವ್ಯವಸ್ಥೆ ಹೊಂದಿದ್ದಾರೆ. ಹೀಗಾಗಿ ತನಿಖೆ ಮಾಡಬಹುದು. ಈ ಆರೋಪಗಳಿಗೆ ಸಾಕ್ಷಿಯಿದ್ದರೆ ಅದನ್ನು ತೋರಿಸಲಿ. ಅದು ಬಿಟ್ಟು ಕುಟುಂಬದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಕಳೆದ 15 ದಿನಗಳಿಂದ ನಮ್ಮ ಮೇಲೆ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ. ನನ್ನ ಮೃತ ತಾಯಿ, ಸಹೋದರಿ ಮತ್ತು ನಿವೃತ್ತ ತಂದೆಯ ಮೇಲೆ ದಾಳಿ ನಡೆಯುತ್ತಿವೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು NCB ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಅಸಹಜ ಸಾವಿಗೆ ತುತ್ತಾದ ಬಳಿಕ ಕೇಂದ್ರ ಸರ್ಕಾರ ಎನ್‌ಸಿಬಿಗೆ ಸಮೀರ್ ವಾಂಖೆಡೆ ಅವರನ್ನು ಕರೆ ತಂದಿದೆ ಎಂದು ಆರೋಪಿಸಿದ್ದಾರೆ. ಸುಶಾಂತ ಸಿಂಗ್ ಸಾವಿನ ಬಳಿಕ ಕೇಳಿ ಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ, ನಟಿಯರನ್ನು ಎನ್‌ಸಿಬಿ ಗುರಿ ಮಾಡಿತ್ತು. ಮೃತ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ನಕಲಿ ಪ್ರಕರಣದಲ್ಲಿ ಸೇರಿಸಿದ್ದಾರೆ ಎಂದು ನವಾಬ್ ಮಲ್ಲಿಕ್ ಆರೋಪಿಸಿದ್ದಾರೆ.


ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...