Homeಮುಖಪುಟಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

- Advertisement -
- Advertisement -

ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.

ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಯುವಕ-ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಯುವಕ ಯುವತಿಯರಿಬ್ಬರು ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯಗೊಂಡಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಏಕಾಏಕಿಯಾಗಿ ಹೋಟೆಲ್ ಮೇಲೆ ದಾಳಿ ನಡೆಸುವ ಅಧಿಕಾರವನ್ನು ಬಜರಂಗದಳದವರಿಗೆ ಕೊಟ್ಟಿದ್ಯಾರು? ಪರಸ್ಪರ ಸಮ್ಮತಿ ಮೇರೆಗೆ ಇಬ್ಬರು ಸ್ನೇಹಿತರು ಒಟ್ಟಿಗೆ ಇದ್ದಾಗಲೂ ಅದನ್ನು ತಪ್ಪು ಎಂದು ಹೇಳಿ ಪೊಲೀಸರಿಗೆ ಒಪ್ಪಿಸಲು ಮತೀಯ ಗೂಂಡಾಗಳಿಗೆ ಅಧಿಕಾರವಿದೆಯೇ? ಪೊಲೀಸರು ಬಜರಂಗದಳದವನ್ನು ಬಂಧಿಸದೇ ಆ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದೇಕೆ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ. ಅಲ್ಲದೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು, ಮಂಡ್ಯದಲ್ಲಿ, ವಿಜಯಪುರದಲ್ಲಿ ನಡೆದಿದ್ದ ಮತೀಯ ಗೂಂಡಾಗಿರಿ ಘಟನೆಗಳು ಮಾಸುವ ಮುಂಚೆಯೇ ಮಂಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಹಿಂದೆಯೂ ಮಂಗಳೂರಿನಲ್ಲಿ ಹಲವು ಇದೇ ರೀತಿಯ ಘಟನೆಗಳು ನಡೆದಿದ್ದವು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೆ ಇತ್ತೀಚೆಗೆ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಮಾತನಾಡಿದ್ದರು. ಅದಕ್ಕೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು. ಅಕ್ಟೋಬರ್ 21 ರಂದು ಬೆಂಗಳೂರಿನಲ್ಲಿ ಪ್ರೀತಿ ಬೇಕು, ದ್ವೇಷ ಸಾಕು ಹೆಸರಿನಲ್ಲಿ ಮತೀಯ ಗೂಂಡಾಗಿರಿ ಮತ್ತು ಅದನ್ನು ಸಮರ್ಥಿಸುವ ಮುಖ್ಯಮಂತ್ರಿಗಳ ಹೇಳಿಕೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ. ಸಿಎಂ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಆಲ್‌ ಇಂಡಿಯಾ ಲಾಯರ್ಸ್ ‌ ಅಸೋಸಿಯೇಷನ್‌ ಫಾರ್‌ ಜಸ್ಟೀಸ್ಸ್ ಸಂಘಟನೆಯು ನೋಟೀಸ್ ಜಾರಿ ಮಾಡಿದೆ.


ಇದನ್ನೂ ಓದಿ: ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. Election ಹತ್ತಿರ ಬಂದಾಗ ನಾನು ಗೌರಿ ನೀನು ಗೌರಿ ಅಂತಾ ಹೊಸ ಹೊಸ website ಗಳು ಹುಟ್ಟಿಕೊಳ್ಳುತ್ತವೆ ಏನೇನೇ ನ್ಯೂಸ್ ಗಳನ್ನು ಬಿತ್ತಲು ಸುರು ಮಾಡುತ್ತವೆ.

    ನೈತಿಕ ಪೋಲಿಸ್ ಗರಿ ತಪ್ಪು, ಇದನ್ನು ಒಪ್ಪಿಕೊಳ್ಳುತ್ತೇವೆ. ಆದರೆ
    ಇಲ್ಲಿ ಹಿಂದೂ ಯುವತಿ – ಮುಸ್ಲಿಂ ಯುವಕ ವಿಷಯ ಬಂದಾಗ ಎದ್ದೇಳುವ ವೆಬ್ ಸೈಟ್ ಗಳು , ಮುಸ್ಲಿಂ ಯುವತಿ- ಹಿಂದೂ ಯುವಕರ ವಿಷಯ ಬಂದ ಸಂದರ್ಭದಲ್ಲಿ ಯಾಕೆ ಮಲಗಿದ್ದವು. ಇಂತಹ ವಿಷಯ ಬಂದಾಗ ನಡೆದ ಧಾಳಿಗಳ ಸಂದರ್ಭದಲ್ಲಿ ಯಾಕೆ ಮಾಧ್ಯಮ ಗಳು ಜಾಣ ಮೌನ ತೋರಿಸುತ್ತಿವೆ. ಅಂದರೆ ಮಾಧ್ಯಮ ವೆಬ್ ಸೈಟ್ ಗಳು ಏನನ್ನು ಪ್ರಚೋದಿಸುತ್ತಾ ಇವೆ ?

    ಹಾಗೂ ಇಲ್ಲಿ ಪೋಲೀಸರ ರಿಪೋರ್ಟ್ ಬರದೆ ಯಾವುದೇ ಘಟನೆಯನ್ನು ನೈತಿಕ ಹಾಗೂ ಅನೈತಿಕ ಎಂದು ಘೋಷಿಸಲು ಮಾಧ್ಯಮ ಗಳಿಗೆ ಅಧಿಕಾರ ಕೊಟ್ಟವರು ಯಾರು?

  2. ಮಾಧ್ಯಮಗಳು ನಮ್ಮನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...