Homeಮುಖಪುಟರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

- Advertisement -
- Advertisement -

ಹಲವು ತಿಂಗಳಿಂದ ಕ್ಷೇತ್ರವಾಸಿಗಳಿಗೆ ನಾಟ್ ರಿಚೇಬಲ್ ಆಗಿದ್ದ ಉತ್ತರ ಕನ್ನಡದ ಸಂಸದ ಅನಂತ್‌ಕುಮಾರ್ ಹೆಗಡೆ ತಮ್ಮ ಮಾಮುಲಿ ಅಸಹಿಷ್ಟುತೆ ಮೂಲಕ ಪ್ರತ್ಯಕ್ಷರಾಗಿದ್ದಾರೆ! ದೀಪಾವಳಿ ಹಬ್ಬದ ಹೊತ್ತಲ್ಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಪರಿಸರ ಮಾಲಿನ್ಯ ಮಾಡಬೇಡಿಯೆಂದು ಜಾಹೀರಾತೊಂದರಲ್ಲಿ ಹೇಳಿದ್ದ ಬಾಲಿವುಡ್‌ನ ಖ್ಯಾತ ನಟ-ಪರಿಸರವಾದಿ ಅಮೀರ್ ಖಾನ್‌ರನ್ನು ಅನಂತ್ ಹೆಗಡೆ ಮೂದಲಿಸಿದ್ದಾರೆ. ಭಾರತದಲ್ಲಿ ಇಂಥ ಹಿಂದು ವಿರೋಧಿ ನಟರಿಗೇನು ಕೊರತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ನಟ, ಪ್ರಾಣಿ ಪ್ರೇಮಿ ಅಮೀರ್ ಖಾನ್ ಸಿಯೆಟ್ ಬೈಕ್ ಟೈರ್ ಕಂಪನಿಯ ಜಾಹೀರಾತಲ್ಲಿ ನಟಿಸುತ್ತ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿತದಿಂದಾಗುವ ಅನಾಹುತದ ಬಗ್ಗೆ ಜಾಗೃತಿ ಮೂಡಿಸಿದ್ದರು. ಇದರಿಂದ ಕೆರಳಿರಿರುವ ಅನಂತ್ ಹೆಗಡೆ ಮುಸ್ಲಿಮರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಆಗುತ್ತಿರುವ ಹಲವು ಮಾಲಿನ್ಯದತ್ತ ಅಮೀರ್ ಗಮನ ಹರಿಸಿದರೆ ಅದೆಷ್ಟೋ ಸಮಸ್ಯೆ ಪರಿಹಾರವಾಗುತ್ತದೆ ಎಂದಿದ್ದಾರೆ. ಸಿಯೆಟ್ ಟೈರ್ ಕಂಪನಿಯ ಮುಖ್ಯಸ್ಥ ಅನಂತ ವರದಾನ್ ಗೋಯೆಂಕಾಗೆ ಜಾಹೀರಾತಿನ ಕುರಿತು ಆಕ್ಷೇಪಗಳಿರುವ ಪತ್ರ ಬರೆದಿರುವ ಸಂಸದ ಹೆಗಡೆ ಅದನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪರಿಸರ ಮತ್ತು ಪ್ರಾಣಿಗಳ ಬಗ್ಗೆ ಅಮೀರ್ ಖಾನ್ ಕಾಳಜಿ ವ್ಯಕ್ತ ಪಡಿಸುತ್ತಿರುವುದಕ್ಕೆ ನನ್ನ ಮೆಚ್ಚುಗೆಯಿದೆ. ಆದರೆ ಅನ್ಯ ಧರ್ಮದಲ್ಲಿ ನಡೆಯುತ್ತಿರುವ ಹಲವು ಆಚರಣೆಗಳ ಬಗ್ಗೆ ಅವರೇಕೆ ಮೌನವಾಗಿದ್ದಾರೆ? ಪಟಾಕಿ ರಸ್ತೆ ಮೇಲೆ ಹೊಡೆಯುವುದರಿಂದ ಸಮಸ್ಯೆಯಾಗುತ್ತದೆಂದಾರೆ, ರಸ್ತೆ ಮೇಲೆ ನಮಾಜ್ ಮಾಡುವುದರಿಂದಲೂ ಟ್ರಾಫಿಕ್ ಸಮಸ್ಯೆಯಾಗತ್ತದೆ. ಧ್ವನಿವರ್ಧಕದಲ್ಲಿ ಆಝಾನ್ ಕೂಗುವುದರಿಂದ ಶಬ್ಧ ಮಾಲಿನ್ಯವಾಗುತ್ತದೆ. ಅದನ್ನೂ ಜಾಹೀರಾತಿನಲ್ಲಿ ತೋರಿಸಿರಿ, ಪ್ರತಿ ದಿನ ಬೆಳಗ್ಗೆ ಚೀರುವ ಧ್ವನಿ ವರ್ಧಕಗಳು, ನಡು ರಸ್ತೆಯಲ್ಲಿ ನಮಾಜ್ ಮಾಡುವುದು ಮತ್ತಿತರ ಆಚರಣೆಗಳತ್ತ ಅಮೀರ್ ಲಕ್ಷವಹಿಸಿದರೆ ಎಷ್ಟೋ ಸಮಸ್ಯೆ ಬಗೆಹರಿಯುತ್ತವೆ ಎಂದು ಅನಂತ ಹೆಗಡೆ ಸಿಯೆಟ್ ಕಂಪನಿ ಮಾಲೀಕರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇಂಥ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲ್ಲಕ ಕುತಂತ್ರವಲ್ಲದೆ ಮತ್ತೇನು ಅಲ್ಲ. ಈ ಜಾಹೀರಾತು ಹಿಂಪಡೆಯಬೇಕು: ಹಿಂದುಗಳೆ ಆಗಿರುವ ನೀವು ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಅನಂತ ಹೆಗಡೆ ಸಿಯೆಟ್ ಕಂಪನಿಯ ಗೋಯೆಂಕಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...