Homeಮುಖಪುಟರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

- Advertisement -
- Advertisement -

ಹಲವು ತಿಂಗಳಿಂದ ಕ್ಷೇತ್ರವಾಸಿಗಳಿಗೆ ನಾಟ್ ರಿಚೇಬಲ್ ಆಗಿದ್ದ ಉತ್ತರ ಕನ್ನಡದ ಸಂಸದ ಅನಂತ್‌ಕುಮಾರ್ ಹೆಗಡೆ ತಮ್ಮ ಮಾಮುಲಿ ಅಸಹಿಷ್ಟುತೆ ಮೂಲಕ ಪ್ರತ್ಯಕ್ಷರಾಗಿದ್ದಾರೆ! ದೀಪಾವಳಿ ಹಬ್ಬದ ಹೊತ್ತಲ್ಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಪರಿಸರ ಮಾಲಿನ್ಯ ಮಾಡಬೇಡಿಯೆಂದು ಜಾಹೀರಾತೊಂದರಲ್ಲಿ ಹೇಳಿದ್ದ ಬಾಲಿವುಡ್‌ನ ಖ್ಯಾತ ನಟ-ಪರಿಸರವಾದಿ ಅಮೀರ್ ಖಾನ್‌ರನ್ನು ಅನಂತ್ ಹೆಗಡೆ ಮೂದಲಿಸಿದ್ದಾರೆ. ಭಾರತದಲ್ಲಿ ಇಂಥ ಹಿಂದು ವಿರೋಧಿ ನಟರಿಗೇನು ಕೊರತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ನಟ, ಪ್ರಾಣಿ ಪ್ರೇಮಿ ಅಮೀರ್ ಖಾನ್ ಸಿಯೆಟ್ ಬೈಕ್ ಟೈರ್ ಕಂಪನಿಯ ಜಾಹೀರಾತಲ್ಲಿ ನಟಿಸುತ್ತ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿತದಿಂದಾಗುವ ಅನಾಹುತದ ಬಗ್ಗೆ ಜಾಗೃತಿ ಮೂಡಿಸಿದ್ದರು. ಇದರಿಂದ ಕೆರಳಿರಿರುವ ಅನಂತ್ ಹೆಗಡೆ ಮುಸ್ಲಿಮರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಆಗುತ್ತಿರುವ ಹಲವು ಮಾಲಿನ್ಯದತ್ತ ಅಮೀರ್ ಗಮನ ಹರಿಸಿದರೆ ಅದೆಷ್ಟೋ ಸಮಸ್ಯೆ ಪರಿಹಾರವಾಗುತ್ತದೆ ಎಂದಿದ್ದಾರೆ. ಸಿಯೆಟ್ ಟೈರ್ ಕಂಪನಿಯ ಮುಖ್ಯಸ್ಥ ಅನಂತ ವರದಾನ್ ಗೋಯೆಂಕಾಗೆ ಜಾಹೀರಾತಿನ ಕುರಿತು ಆಕ್ಷೇಪಗಳಿರುವ ಪತ್ರ ಬರೆದಿರುವ ಸಂಸದ ಹೆಗಡೆ ಅದನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪರಿಸರ ಮತ್ತು ಪ್ರಾಣಿಗಳ ಬಗ್ಗೆ ಅಮೀರ್ ಖಾನ್ ಕಾಳಜಿ ವ್ಯಕ್ತ ಪಡಿಸುತ್ತಿರುವುದಕ್ಕೆ ನನ್ನ ಮೆಚ್ಚುಗೆಯಿದೆ. ಆದರೆ ಅನ್ಯ ಧರ್ಮದಲ್ಲಿ ನಡೆಯುತ್ತಿರುವ ಹಲವು ಆಚರಣೆಗಳ ಬಗ್ಗೆ ಅವರೇಕೆ ಮೌನವಾಗಿದ್ದಾರೆ? ಪಟಾಕಿ ರಸ್ತೆ ಮೇಲೆ ಹೊಡೆಯುವುದರಿಂದ ಸಮಸ್ಯೆಯಾಗುತ್ತದೆಂದಾರೆ, ರಸ್ತೆ ಮೇಲೆ ನಮಾಜ್ ಮಾಡುವುದರಿಂದಲೂ ಟ್ರಾಫಿಕ್ ಸಮಸ್ಯೆಯಾಗತ್ತದೆ. ಧ್ವನಿವರ್ಧಕದಲ್ಲಿ ಆಝಾನ್ ಕೂಗುವುದರಿಂದ ಶಬ್ಧ ಮಾಲಿನ್ಯವಾಗುತ್ತದೆ. ಅದನ್ನೂ ಜಾಹೀರಾತಿನಲ್ಲಿ ತೋರಿಸಿರಿ, ಪ್ರತಿ ದಿನ ಬೆಳಗ್ಗೆ ಚೀರುವ ಧ್ವನಿ ವರ್ಧಕಗಳು, ನಡು ರಸ್ತೆಯಲ್ಲಿ ನಮಾಜ್ ಮಾಡುವುದು ಮತ್ತಿತರ ಆಚರಣೆಗಳತ್ತ ಅಮೀರ್ ಲಕ್ಷವಹಿಸಿದರೆ ಎಷ್ಟೋ ಸಮಸ್ಯೆ ಬಗೆಹರಿಯುತ್ತವೆ ಎಂದು ಅನಂತ ಹೆಗಡೆ ಸಿಯೆಟ್ ಕಂಪನಿ ಮಾಲೀಕರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇಂಥ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲ್ಲಕ ಕುತಂತ್ರವಲ್ಲದೆ ಮತ್ತೇನು ಅಲ್ಲ. ಈ ಜಾಹೀರಾತು ಹಿಂಪಡೆಯಬೇಕು: ಹಿಂದುಗಳೆ ಆಗಿರುವ ನೀವು ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಅನಂತ ಹೆಗಡೆ ಸಿಯೆಟ್ ಕಂಪನಿಯ ಗೋಯೆಂಕಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...