Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...