Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...