Homeಮುಖಪುಟಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ: ಬಿಜೆಪಿ ಮುಖಂಡರಿದ್ದ ವೇದಿಕೆಯಲ್ಲಿ ಹಿಂದುತ್ವವಾದಿಯ ದ್ವೇಷ ಭಾಷಣ

- Advertisement -
- Advertisement -

‘ಮತಾಂತರ ಮಾಡಲು ಬಂದವರ ತಲೆ ತೆಗೆಯಿರಿ. ನಾನು ಸಂತನಾಗಿದ್ದರೂ ದ್ವೇಷವನ್ನು ಹರಡುತ್ತಿದ್ದೇನೆ ಎಂದು ನೀವು ಹೇಳಬಹುದು. ಆದರೆ ಕೆಲವೊಮ್ಮೆ ಬೆಂಕಿಯನ್ನು ಹೊತ್ತಿಸುವುದು ಮುಖ್ಯ. ನಾನು ನಿಮಗೆ ಹೇಳುತ್ತಿದ್ದೇನೆ, ನಿಮ್ಮ ಮನೆ, ರಸ್ತೆ, ನೆರೆಹೊರೆ, ಹಳ್ಳಿಗೆ ಯಾರೇ ಬಂದರು ಅವರನ್ನು ಕ್ಷಮಿಸಬೇಡಿ’ ಎಂದು ಛತ್ತೀಸ್ ಗಡದ ಸ್ವಾಮಿ ಪರಮಾತ್ಮಾನಂದ ಅಲ್ಪಸಂಖ್ಯಾತರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿರುವ ವಿಡಿಯೋ ಇತ್ತೀಚಿಗೆ ವೈರಲ್ ಆಗಿದೆ.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ, ಸರ್ವ ಸನಾತನ ಹಿಂದು ರಕ್ಷಾ ಮಂಚ್ ಅಕ್ಟೋಬರ್‌ 1ರಂದು ಆಯೋಜಿಸಿದ್ದ ‘ಧಾರ್ಮಿಕ ಮತಾಂತರ ನಿಲ್ಲಿಸಿ’ (ಬಂದ್‌ ಕರೋ ಧರ್ಮಾಂತರನ್‌) ಪ್ರತಿಭಟನೆಯಲ್ಲಿ ಸ್ವಾಮಿ ಪರಮಾತ್ಮಾನಂದ ಈ ದ್ವೇಷ ಭಾಷಣ ಮಾಡುವಾಗ ಛತ್ತೀಸ್ ಗಡದ ಬಿಜೆಪಿಯ ಪ್ರಭಾವಿ ನಾಯಕರಾದ ರಾಮ್ವಿಚಾರ್ ನೇತಮ್, ನಂದಕುಮಾರ್ ಸಾಯಿ ಮತ್ತು ಬಿಜೆಪಿಯ ವಕ್ತಾರ ಅನುರಾಗ್ ಸಿಂಗ್ ದೇವ್ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು ಎಂದು ದಿ ವೈರ್ ವರದಿ ಮಾಡಿದೆ.

‘ನಾನೊಬ್ಬ ಸಂತ. ನಾನು ಹೆದರುವುದಿಲ್ಲ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಮನೆಯಲ್ಲಿ ಲಾಠಿ ಇಟ್ಟುಕೊಳ್ಳಿ, ನಮ್ಮ ಹಳ್ಳಿಗಳಲ್ಲಿ ಜನರು ಕೈ ಕೊಡಲಿ ಇಟ್ಟಕೊಳ್ಳುತ್ತಾರೆ. ಅವರು ಕೊಡಲಿಗಳನ್ನು ಏಕೆ ಇಟ್ಟುಕೊಳ್ಳುತ್ತಾರೆ? ನೀವು ನಿಮ್ಮ ಹತ್ತಿರ ಪರಶು ಇಟ್ಟುಕೊಳ್ಳಿ’ ಎಂದು ಕೋಮು ದ್ವೇಷ ಕಾರಿದ್ದಾರೆ.

ಮುಂದುವರೆದು, ‘ನೀವೇಕೆ ಬಾವಿಗಾಗಿ ಸಾಗರವನ್ನು ತೊರೆಯುತ್ತೀರಿ? ಎಂದು ಮತಾಂತರಗೊಂಡ ಕ್ರೈಸ್ತರೊಂದಿಗೆ ಮೊದಲು ಸೌಜನ್ಯದೊಂದಿಗೆ ಕೇಳಲು ಬಯಸುತ್ತೇನೆ. ಬೇಡ ಎನ್ನುತ್ತೇನೆ, ಕೊನೆಗೆ ಕೊಲ್ಲುತ್ತೇನೆ ಎಂದು ನಿಲ್ಲು, ಪ್ರತಿಭಟಿಸು, ಕೊಲ್ಲು (ರೊಕೊ, ಫಿರ್ ಟೊಕೊ, ಫಿರ್ ಥೋಕೊ) ನಿಯಮವನ್ನು ಪಾಲಿಸಿ’ ಎಂದಿದ್ದಾರೆ.

ವೀಡಿಯೋದಲ್ಲಿ, ಮಾಜಿ ಸಂಸದೆ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಮಾಜಿ ಅಧ್ಯಕ್ಷ ನಂದ ಕುಮಾರ್ ಸಾಯಿ ಪರಮಾತ್ಮಾನಂದರ ಭಾಷಣಕ್ಕೆ ನಗುತ್ತಾ, ಚಪ್ಪಾಳೆ ತಟ್ಟುವುದು, ಅವರ ಮಾತುಗಳಿಗೆ ಒಪ್ಪಿಗೆ ಸೂಚಿಸಿರುವಂತೆ ಕಾಣುವುದನ್ನು ನೋಡಬಹುದು. ವೇದಿಕೆಯಲ್ಲಿ ನಾಯಕರೆಲ್ಲರೂ ಬಿಲ್ಲು, ಬಾಣ ಮತ್ತು ಈಟಿಯೊಂದಿಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.

ಸಂಸ್ಕೃತ ಮಂಡಳಿಯ ಮಾಜಿ ಮುಖ್ಯಸ್ಥ ಪರಮಾತ್ಮಾನಂದರ ಛತ್ತೀಸ್ ಗಡದ ಪ್ರಮುಖ ಹಿಂದುತ್ವವಾದಿ ನಾಯಕರಾಗಿದ್ದು, ಅಲ್ಪಸಂಖ್ಯಾತರ ವಿರುದ್ಧ ಹಿಂಸಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಈ ಹಿಂದೆ ಹಸು ಕಳ್ಳ ಸಾಗಣೆದಾರರನ್ನು ಕೊಲ್ಲುವವರನ್ನು ಅಭಿನಂದಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. 2017ರಲ್ಲಿ ‘ಗೋವುಗಳನ್ನು ಕೊಲ್ಲುವವರನ್ನು ಗಾಜಿನ ಗುಂಡುಗಳಿಂದ ಹೊಡೆದು ಸಾಯಿಸಬೇಕು’ ಎಂದು ಹೇಳಿಕೆ ನೀಡಿದ್ದರು.

ಸಮಾನ ಮನಸ್ಕ ಹಿಂದುತ್ವವಾದಿಗಳ ಒಕ್ಕೂಟ ಸರ್ವ ಸನಾತನ ಹಿಂದು ರಕ್ಷಾ ಮಂಚ್, ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಸಲ್ಲಿಸಿದ್ದು, ಕಾನೂನು ಬಾಹಿರ’ ಧಾರ್ಮಿಕ ಮತಾಂತರವನ್ನು ತಡೆಗಟ್ಟಲು, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ರಿಶ್ಚಿಯನ್ ಮಿಶನರಿಗಳು ಹಾಗೂ ಇತ್ತೀಚೆಗೆ ಮತಾಂತರಗೊಂಡ ಬುಡಕಟ್ಟು ಜನರ ಮೇಲೆ ಮೇಲೆ ಕಣ್ಣಿಡುವಂತೆ ಮನವಿ ಮಾಡಿತ್ತು.


ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...