Homeಕರ್ನಾಟಕದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ದೇವೆಗೌಡರ ಕುಟುಂಬದ ಕುರಿತು ಸುಳ್ಳು ಸುದ್ದಿ ಪ್ರಕಟ: ವಿಶ್ವೇಶ್ವರ್ ಭಟ್ ಮೇಲೆ ಎಫ್‍ಐಆರ್ ದಾಖಲು

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಡಿದು ಮೈಸೂರಿನಲ್ಲಿ ರಂಪಾಟ ಮಾಡಿದ್ದಾರೆ. ಅಲ್ಲದೇ ತನ್ನ ತಾತ ದೇವೇಗೌಡರಿಗೆ ಕರೆ ಮಾಡಿ ನನ್ನ ಸೋಲಿಗೆ ನೀವೇ ಕಾರಣ, ನನ್ನನ್ನು ಚಕ್ರವ್ಯೂಹದಲ್ಲಿ ಸಿಕ್ಕಿಸಿಬಿಟ್ಟಿದ್ದೀರಿ ಎಂದೆಲ್ಲಾ ಸುಳ್ಳು ಸುದ್ದಿ ಪ್ರಕಟಿಸಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಮತ್ತು ಸಿಬ್ಬಂದಿಗಳ ಮೇಲೆ ಮಾನಹಾನಿ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಪ್ರದೀಪ್ ಕುಮಾರ್ ಎಸ್‍ಪಿ ಎಂಬುವವರು ಮೇ 26ರಂದು ನೀಡಿರುವ ದೂರಿನ ಅನ್ವಯ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ವಿಶ್ವವಾಣಿ ಪತ್ರಿಕೆಯು ದೇವೇಗೌಡರ ಮತ್ತು ನಿಖಿಲ್ ಕುಮಾರಸ್ವಾಮಿಯವರ ತೇಜೋವಧೆ ಮಾಡಲೇಂದೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂದು ದೂರಿದ್ದಾರೆ.

ಒಬ್ಬ ಮಹಿಳೆ ವಿರುದ್ಧ ಸೋತಿದ್ದು ನನಗೆ ಅವಮಾನವಾಗಿದೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ, ಹಾಗೂ ಹೆಚ್.ಡಿ ದೇವೆಗೌಡರ ಬಗ್ಗೆ ‘ಗೌಡರ ಮೊಮ್ಮಕ್ಕಳ ಗದ್ದಲ ಗೊಂದಲ’ ಎಂದೆಲ್ಲಾ ಅಪಪ್ರಚಾರ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ದೇವೇಗೌಡರಿಗೆ ಬೆದರಿಕೆ ಕೂಗಟ ಮಾಡಿದ್ದಾರೆ ಎನ್ನುವ ರೀತಿಯಲ್ಲಿ ವಿಶ್ವವಾಣಿ ಪತ್ರಿಕೆಯಲ್ಲಿ, ಇದೊಂದು ಪೂರ್ವನಿಯೋಜಿತ ಒಳಸಂಚಿನ ಪ್ರಕಟಣೆಯಾಗಿದ್ದು, ಉಹಾಪೋಹ ಕಲ್ಪನೆಯ ಪ್ರಕಟಣೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಿದ್ದರು.

ಈ ಕುರಿತು ಎನ್‍ಡಿಟಿವಿಯೊಂದಿಗೆ ಪ್ರತಿಕ್ರಿಯಿಸಿರುವ ವಿಶ್ವೇಶ್ವರ್ ಭಟ್ ನಾನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮರುದಿನ ತಂದೆಯ ನೋವು ಎಂದು ಅವರ ಹೇಳಿಕೆಯನ್ನು ಸಹ ವರದಿ ಪ್ರಕಟಿಸಿದ್ದೇನೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ನನಗೆ ಎರಡು ಬಾರಿ ಕರೆ ಮಾಡಿದ್ದರು. ಎರಡನೇ ಸಲ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದ್ದಾರೆ. ಅಲ್ಲದೇ ನಾನು ಬಿಜೆಪಿ ಪರವಾಗಿ ಇಲ್ಲ, ಅದು ವಿರೋಧ ಪಕ್ಷದಲ್ಲಿರುವ ಕಾರಣ ನನ್ನನ್ನ ಬೆಂಬಲಿಸುತ್ತಿದೆ ಅಷ್ಟೇ ಎಂದಿದ್ದಾರೆ.

ಈ ಕುರಿತು ಗೃಹ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಮಾಧ್ಯಮಗಳು ಫೋರ್ಜರಿ ಮಾಡಿದರೆ ಅದು ತಪ್ಪು. ಅಂತಹ ಮಾಧ್ಯಮವನ್ನು ಯಾರು ರಕ್ಷಿಸಿದರೆ ಅದಕ್ಕಿಂತ ನಾಚಿಕೆ ಮತ್ತೊಂದಿಲ್ಲ, ಇದರ ಕುರಿತು ತನಿಖೆ ನಡೆಯುತ್ತಿದೆ, ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಒಬ್ಬ ಸಂಪಾದಕನ ಮೇಲೆ ಎಫ್‍ಐಆರ್ ದಾಖಲಾಗಿದೆ. ಅದು ಸಹ ಸುಳ್ಳು ಸುದ್ದಿ ಪ್ರಕಟಿಸಿರುವ ಕಾರಣಕ್ಕಾಗಿ. ಯಾವ ಕನ್ನಡ ಚಾನೆಲ್‍ಗಳು ಕೂಡ ಇದನ್ನು ಸುದ್ದಿ ಮಾಡುತ್ತಿಲ್ಲ ಏಕೆ? ಎಂದು ಹಲವಾರು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಸಂಪಾದಕರ ಜೊತೆ ಈ ಖಾವಿ ತೊಟ್ಟ ಎರಡೆರಡು ಅತ್ಯಾಚಾರದ ಆರೋಪ ಹೊತ್ತಿರುವ ಈ ಕ್ಷಣಕ್ಕೂ ಬೇಲ್ ಮೇಲೆ ತಿರುಗುತ್ತಿರುವ ಈ ಸ್ವಾಮೀಜಿಯನ್ನು ಬಂಧಿಸಬೇಕು. ಯಾಕೆಂದರೆ ಇವನು ಈ ಪತ್ರಿಕೆಯ ಬೇನಾಮಿ ಪಾಲುದಾರ. ಸರಿಯಾಗಿ ಒದ್ದು ವಿಚಾರಣೆ ಮಾಡಿದರೆ ಗೌರಿ ಲಂಕೇಶ್ ಹತ್ಯೆಯಲ್ಲಿ ಈತನ ಪಾತ್ರವು ಬಯಲಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...