Homeಮುಖಪುಟಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

ಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ 39 ಮಹಿಳಾ ಸೇನಾ ಅಧಿಕಾರಿಗಳು ನಡೆಸಿದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ, ಇದೀಗ ಶಾಶ್ವತ ಆಯೋಗವನ್ನು (Permanent Commission) ಪಡೆದುಕೊಂಡಿದ್ದಾರೆ. ನೂತನ ಖಾಯಂ ಆಯೋಗವನ್ನು ಏಳು ಕರ್ತವ್ಯದ ದಿನಗಳ ಒಳಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ಆದೇಶಿಸಿದೆ.

ಪರ್ಮನೆಂಟ್ ಕಮಿಷನ್ (ಖಾಯಂ ಆಯೋಗ) ಎಂದರೆ ನಿವೃತ್ತಿಯವರೆಗೂ ಸೇನಾ ವೃತ್ತಿಯಲ್ಲಿ ಇರುವುದು. ಕಿರು ಸೇವಾ ಆಯೋಗವು 10 ವರ್ಷಗಳ ಅವಧಿಯದ್ದಾಗಿದೆ. ಖಾಯಂ ಆಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೆ ಅಧಿಕಾರಿಯು ನಾಲ್ಕು ವರ್ಷಗಳ ವಿಸ್ತರಣೆಯನ್ನು ಆಯ್ದುಕೊಳ್ಳಬಹುದಾಗಿದೆ.

ಖಾಯಂ ಆಯೋಗವನ್ನು ನಿರಾಕರಿಸಲ್ಪಟ್ಟಿದ್ದರಿಂದ ಕಿರು ಸೇವಾ ಆಯೋಗದ 71 ಮಹಿಳಾ ಅಧಿಕಾರಿಗಳು  ಶಾಶ್ವತ ಆಯೋಗಕ್ಕಾಗಿ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ 71 ಅಧಿಕಾರಿಗಳ ಪೈಕಿ 39 ಮಹಿಳಾ ಅಧಿಕಾರಿಗಳು ಖಾಯಂ ಆಯೋಗಕ್ಕೆ ಅರ್ಹರಾಗಿದ್ದಾರೆ. ಇನ್ನು ಏಳು ಮಂದಿ ವೈದ್ಯಕೀಯವಾಗಿ ಅಸಮರ್ಥರು ಹಾಗೂ 25 ಮಂದಿ ‘ಶಿಸ್ತಿನ ಸಮಸ್ಯೆ’ ಹೊಂದಿದ್ದಾರೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿತ್ತು.

ತಿರಸ್ಕೃತರಾಗಿರುವ 25 ಮಹಿಳಾ ಅಧಿಕಾರಿಗಳು ಯಾವ ಕಾರಣಕ್ಕಾಗಿ ಶಾಶ್ವತ ಆಯೋಗಕ್ಕೆ ಅರ್ಹತೆ ಪಡೆದುಕೊಂಡಿಲ್ಲ ಎಂಬುದನ್ನು ವಿವರಿಸುವ ವಿಸ್ತೃತ ವರದಿ ನೀಡುವಂತೆ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಹಾಗೂ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಒಳಗೊಂಡ ನ್ಯಾಯಪೀಠ, ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗ ರಚಿಸುವಂತೆ ತೀರ್ಪು ನೀಡಿದೆ. ಅಲ್ಲದೆ, ಯಾವುದೇ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬಾರದು ಎಂದು ಅಕ್ಟೋಬರ್ 1ರಂದು ಮಧ್ಯಂತರ ಆದೇಶ ನೀಡಿತ್ತು.

ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಮಹಿಳಾ ಅಧಿಕಾರಿಗಳ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲರಾದ ವಿ. ಮೋಹನ, ಹುಜೇಫಾ ಅಹ್ಮದಿ ಮತ್ತು ಮೀನಾಕ್ಷಿ ಅರೋರಾ ಆರೋಪಿಸಿದ್ದರು.

ಕಳೆದ ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಮಾನದಂಡವನ್ನು ತಲುಪಿದ ಕಿರಿಯ ಸೇವಾ ಆಯೋಗದ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡಬೇಕೆಂದು ತೀರ್ಪು ನೀಡಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿತ್ತು.

ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವ ಸೇನೆಯ ಮೌಲ್ಯಮಾಪನ ಮಾನದಂಡವು ಅವರ ವಿರುದ್ಧ ವ್ಯವಸ್ಥಿತವಾಗಿ ತಾರತಮ್ಯ ಎಸಗುತ್ತಿದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ಹಿಂದೆ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನ ಪರಿಣಾಮವಾಗಿ ಜುಲೈ ತಿಂಗಳಿನಲ್ಲಿ 147 ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲಾಗಿತ್ತು.

ಭಾರತೀಯ ಸೈನ್ಯದಲ್ಲಿ ಉನ್ನತ ನಾಯಕತ್ವದ ನೇತೃತ್ವಕ್ಕೆ ಸಶಕ್ತಗೊಳಿಸಲು ಶಾಶ್ವತ ಆಯೋಗ ಮಂಜೂರಾದ ಎಲ್ಲಾ ಮಹಿಳಾ ಅಧಿಕಾರಿಗಳನ್ನು ವಿಶೇಷ ತರಬೇತಿ ಕೋರ್ಸ್‌ಗಳಿಗೆ ಮತ್ತು ಸವಾಲಿನ ಮಿಲಿಟರಿ ಕಾರ್ಯಯೋಜನೆಗಳಿಗೆ ಒಳಪಡಿಸಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆ ನೀಡಿತ್ತು.


ಇದನ್ನೂ ಓದಿ: ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...