Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...