Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...