Homeಮುಖಪುಟಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

- Advertisement -
- Advertisement -

ನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿ ಮಗುವನ್ನು ಮನೆಗೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

23 ವರ್ಷದ ಆರೋಪಿಯು ಮಗುವಿಗೆ ಪರಿಚಯವಿದ್ದನು ಹಾಗೂ ಆಗಾಗ್ಗೆ ಮಗುವಿನ ಮನೆಗೂ ಬರುತ್ತಿದ್ದನು ಎಂದು ರಾಜೇಂದ್ರನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ದುಷ್ಕೃತ್ಯವು ಆರೋಪಿಯ ಮನೆಯಲ್ಲಿ ನಡೆದಿದೆ. ಮಗು ಎಚ್ಚರಿಕೆಯನ್ನು ಸೂಚಿಸಿದಾಗ ಆತ ಮಗುವನ್ನು ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಮಗುವಿನ ಮನೆಯವರಿಗೆ ತಿಳಿದು ಮನೆಗೆ ಹೋಗಿ ವಿಚಾರಿಸಿದಾಗ ಘಟನೆ ಹೊರಬಂದಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಬಿ.ಗಂಗಾಧರ್‌ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೋಷಕರು ಗುರುವಾರ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಎರಡನೇ ಪ್ರಕರಣ: ಕೆಲವು ದಿನಗಳ ಹಿಂದೆ ಬಾಲಕಿಯ ಸ್ನೇಹಿತ ಮದುವೆಯಾಗುವುದಾಗಿ ನಂಬಿಸಿ ಕೆಲವು ದಿನಗಳ ಹಿಂದೆ ಅತ್ಯಾಚಾರ ಎಸಗಿದ್ದನು. ಬಂಜಾರ ಹಿಲ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ವಿದ್ಯಾರ್ಥಿನಿಯಾಗಿದ್ದು, ಆರೋಪಿಯು ದಿನಗೂಲಿ ನೌಕರನಾಗಿದ್ದಾನೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ರಾಜಸ್ಥಾನದಲ್ಲಿ ಶಿಕ್ಷಕನಿಂದ ಅತ್ಯಾಚಾರ

ಇತ್ತೀಚಿನ ದಿನಗಳಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. 31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ಇತ್ತೀಚೆಗೆ ನಡೆದಿತ್ತು. ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿತ್ತು.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿದಿತ್ತು. “ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ” ಎಂದು ಪೊಲೀಸರು ತಿಳಿಸಿದ್ದರು.

ಭಯಾನಕ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರದ ಮುಂಬೈನಲ್ಲಿ 15 ವರ್ಷದ ಬಾಲಕಿ ಮೇಲೆ ಒಂಬತ್ತು ತಿಂಗಳ ಅವಧಿಯಲ್ಲಿ, ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಭಯಾನಕ, ಅಮಾನವೀಯ ಘಟನೆಯ ವಿವರಗಳನ್ನು ಪೊಲೀಸರು ಇತ್ತೀಚೆಗೆ ಬಹಿರಂಗಪಟ್ಟಿದ್ದರು.

ಕಳೆದ ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಅತ್ಯಾಚಾರವನ್ನು ವಿಡಿಯೊ ಮಾಡಿಕೊಂಡಿದ್ದನು. ಇದೆ ವಿಡಿಯೊವನ್ನು ಇಟ್ಟುಕೊಂಡು ಬಾಲಕಿಯನ್ನು ಬ್ಲಾಕ್ ಮೇಲೆ ಮಾಡುವ ಮೂಲಕ ಯುವಕನ ಗೆಳೆಯರು ಮತ್ತು ಇತರ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು.

ಬೆಚ್ಚಿ ಬೀಳಿಸಿದ್ದ ದಲಿತ ಬಾಲಕಿಯ ಅತ್ಯಾಚಾರ

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದನು, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದನು ಎಂದು ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಹೇಳಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿರಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...