Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...